SHIVAMOGGA LIVE NEWS | 28 NOVEMBER 2023
SHIMOGA : ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿ.ವೈ.ವಿಜಯೇಂದ್ರ ನ.29ರಂದು ಮೊದಲ ಭಾರಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆ ಬೃಹತ್ ಬೈಕ್ ಜಾಥ ಮತ್ತು ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಘರಾಜ್, ನಗರದ ಬೆಕ್ಕಿನ ಕಲ್ಮಠದಿಂದ ತೆರೆದ ವಾಹನದಲ್ಲಿ ರಜ್ಯಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಎರಡು ಸಾವಿರಕ್ಕೂ ಹೆಚ್ಚು ಬೈಕ್ಗಳು ಜಾಥಾದಲ್ಲಿ ಭಾಗವಹಿಸಲಿವೆ. ಪಿಇಎಸ್ ಕಾಲೇಜು ಪ್ರೇರಣಾ ಸಭಾಂಗಣದವರೆಗೆ ಜಾಥಾ ನಡೆಯಲಿದೆ ಎಂದರು.
ಇದನ್ನೂ ಓದಿ – ಹುತಾತ್ಮ ಯೋಧರಿಗೆ ಅಪಮಾನ, ಶಾಸಕರು ಕ್ಷಮೆ ಕೇಳಬೇಕೆಂದು ರಾಘವೇಂದ್ರ ಆಗ್ರಹ
ಪ್ರೇರಣಾ ಸಭಾಂಗಣದಲ್ಲಿ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ಚರಪ್ಪ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಷತ್ ಸದಸ್ಯರಾದ ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200