ಶಿವಮೊಗ್ಗದಲ್ಲಿ ಕುದುರೆ ಏರಿ ಬಂದ ಶಾಸಕ, ಕಾರಿಗೆ ಹಗ್ಗ ಕಟ್ಟಿ ಎಳೆತಂದ ಕಾರ್ಯಕರ್ತರು, ಚಟ್ಟದ ಮೇಲೆ ಬೈಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JUNE 2024

SHIMOGA : ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಲಾಯಿತು. ಬಿಜೆಪಿಯ ವಿವಿಧ ಮೋರ್ಚಾಗಳು ಒಂದೊಂದು ಬಗೆಯಲ್ಲಿ ಪ್ರತಿಭಟನೆ ನಡೆಸಿದವು.

ತರಕಾರಿಗಳ ಬೆಲೆ ದುಬಾರಿ ಆಗಿದೆ ಎಂದು ಆರೋಪಿಸಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಯಿತು. ಎಲ್ಲ ತರಕಾರಿಗಳನ್ನು ಇರಿಸಿ, ಅವುಗಳ ಬೆಲೆ ನಮೂದು ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

BJP Protest against Petrol Diesel Hike in Shimoga

ಕುದುರೆ ಏರಿ ಬಂದ ಶಾಸಕ

ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಬೈಕ್‌ ಒಂದರ ಅಣಕು ಶವಯಾತ್ರೆ ನಡೆಸಲಾಯಿತು. ಚಟ್ಟದ ಮೇಲೆ ಬೈಕ್‌ ಇರಿಸಿ ಹೊತ್ತು ತರಲಾಯಿತು. ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಕಾರು ತೊರೆದು ನೆಹರು ರಸ್ತೆಯಲ್ಲಿ ಕುದುರೆ ಏರಿ ಬಂದರು.

BJP Protest against Petrol Diesel Hike in Shimoga

ಯುವ ಮೋರ್ಚಾ ಕಾರ್ಯಕರ್ತರು ದುರ್ಗಿಗುಡಿಯಿಂದ ಮಾರುತಿ ಕಾರೊಂದನ್ನು ಹಗ್ಗ ಕಟ್ಟಿ ಎಳೆದು ತಂದರು. ಅದರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮುಖವಾಡ ಧರಿಸಿದ್ದವರನ್ನು ಕೂರಿಸಲಾಗಿತ್ತು. ಇಬ್ಬರ ಕೈಯಲ್ಲೂ ಖಾಲಿ ಚಿಪ್ಪು ಮತ್ತು ದಾಸವಾಳ ಹೂವು ಇದ್ದವು.

BJP Protest against Petrol Diesel Hike in Shimoga

ರೈತ ಮೋರ್ಚಾದ ಕಾರ್ಯಕರ್ತರು ಎತ್ತಿನ ಗಾಡಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಸ್ತೂರ ಬಾ ಕಾಲೇಜು ರಸ್ತೆಯಿಂದ ದ್ವಿಚಕ್ರ ವಾಹನಗಳಿಗೆ ಹಗ್ಗ ಕಟ್ಟಿ ಎಳೆದುಕೊಂಡು ಬಂದು ಪ್ರತಿಭಟಿಸಿದರು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನಾ ಸಭೆ ನಡೆಸಲಾಯಿತು. 

BJP Protest against Petrol Diesel Hike in Shimoga

ಯಾರೆಲ್ಲ ಏನೆಲ್ಲ ಹೇಳಿದರು?

ಎಸ್‌.ಎನ್.ಚನ್ನಬಸಪ್ಪ, ಶಾಸಕ : ಸರ್ಕಾರ ಒಂದು ಕಡೆ ಎಲ್ಲ ಉಚಿತವಾಗಿ ಕೊಡಬೇಕು ಎಂದು ಹೊರಟಿದೆ. ಮತ್ತೊಂದು ಕಡೆ ದುಪ್ಪಟ್ಟು ವಸೂಲಿ ಮಾಡುತ್ತಿದೆ. ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳ ನಾಗರಿಕರಿಗೆ ಮಾಡಿದ ದ್ರೋಹ. ಈ ಸರ್ಕಾರ ಎಲ್ಲ ರೀತಿಯಿಂದಲು ಪಾಪರ್‌ ಆಗಿದೆ. ಎಲ್ಲರ ಜೇಬಿಗು ಕನ್ನಾ ಹಾಕುತ್ತಿದೆ. ಇಂತಹ ಸರ್ಕಾರ ಹೆಚ್ಚು ದಿನ ಇರಲು ಬಿಡಬಾರದು.

BJP Protest against Petrol Diesel Hike in Shimoga

ಭಾರತಿ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯೆ : ರಾಜ್ಯದಲ್ಲಿ ಬಿಜೆಪಿ ಇದ್ದಾಗ ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸಿತ್ತು. ಆದರೆ ಈಗ ಜನರ ಬದುಕಿನ ಮೇಲೆ ಬರೆ ಎಳೆಯುವ ಕೆಲಸವಾಗುತ್ತಿದೆ. ಬೆಲೆ ಏರಿಕೆಯ ನೇರ ಪರಿಣಾಮ ಅಡುಗೆ ಮನೆ ಮೇಲೆ ಉಂಟಾಗುತ್ತದೆ. ತರಕಾರಿ, ಎಣ್ಣೆ ಎಲ್ಲವೂ ದುಬಾರಿ ಆಗಿದೆ. ನಮ್ಮ ರಾಜ್ಯದ ಹಣ ಪಕ್ಕದ ರಾಜ್ಯಕ್ಕೆ ಹೋಗುತ್ತಿದೆ. ನಿಗಮದ ಹಣ ಹೋಗಿರುವುದೆ ಇದಕ್ಕೆ ಸಾಕ್ಷಿ.

BJP Protest against Petrol Diesel Hike in Shimoga

ಇದನ್ನೂ ಓದಿ – ಗೋಪಿ ಸರ್ಕಲ್‌ನಲ್ಲಿ ಎಂ.ಬಿ.ಭಾನುಪ್ರಕಾಶ್‌ ಕೊನೆಯ ಭಾಷಣ, ಏನೆಲ್ಲ ಹೇಳಿದ್ದರು?, ಇಲ್ಲಿದೆ ಡಿಟೇಲ್ಸ್‌

ಡಿ.ಎಸ್.ಅರುಣ್‌, ವಿಧಾನ ಪರಿಷತ್‌ ಸದಸ್ಯ : ಪೆಟ್ರೋಲ್‌, ಡಿಸೇಲ್‌ ದರವನ್ನು ಕೇಂದ್ರ ಸರ್ಕಾರ ಮಾತ್ರ ಏರಿಕೆ ಮಾಡಲಿದೆ ಎಂದು ಜನರು ಭಾವಿಸುತ್ತಾರೆ. ಈಗ ದರ ಹೆಚ್ಚಳ ಮಾಡಿರುವುದು ರಾಜ್ಯ ಸರ್ಕಾರ. ಇದನ್ನು ನಮ್ಮ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಬೇಕು.

ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

BJP Protest against Petrol Diesel Hike in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment