ಶಿವಮೊಗ್ಗ: ತೀವ್ರ ಬರ ಪರಿಸ್ಥಿತಿ, ಕುಡಿಯುವ ನೀರಿನ ಅಭಾವ ಹಾಗೂ ರೈತರ ಬೆಳೆ ಹಾನಿ ಪರಿಸ್ಥಿತಿಯನ್ನು ನೇರವಾಗಿ ವೀಕ್ಷಿಸಿ ಅಧ್ಯಯನ ನಡೆಸಲು ಬಿಜೆಪಿ ನಿಯೋಗವು ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕುಗಳ ವಿವಿಧ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರವಾಸದ ವೇಳೆ ತಂಡವು ಬರದಿಂದ ಸಂಕಷ್ಟಕ್ಕೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಲಿದೆ. ರೈತರ ಕುಂದುಕೊರತೆಗಳನ್ನು ಆಲಿಸಲಿದೆ. ನಂತರ ಸಮಗ್ರ ವರದಿಯನ್ನು ಸಿದ್ಧಪಡಿಸಿ ಸರ್ಕಾರದಿಂದ ಸೂಕ್ತ ಬರ ಪರಿಹಾರ ದೊರಕಿಸಿಕೊಡಲು ಒತ್ತಾಯಿಸಲಾಗುವುದು ಎಂದು ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಅಧ್ಯಯನ ತಂಡದ ಸಂಯೋಜಕರಾಗಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಕಾರ್ಯನಿರ್ವಹಿಸಲಿದ್ದಾರೆ. ಶಾಸಕರಾದ ಆರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಸೇರಿ ಪ್ರಮುಖರು ಈ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ.
