ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021
ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲಿ ಪತ್ತೆ ಹಚ್ಚಲಿದ್ದಾರೆ. ಇನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರವನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಲಿದ್ದಾರೆ. ಪ್ರಕರಣದ ತನಿಖೆ ವಿಚಾರವಾಗಿ ಮುಖ್ಯಮಂತ್ರಿಗಳು ನಿಗಾ ವಹಿಸಿದ್ದಾರೆ ಎಂದರು.
ಗೃಹ ಸಚಿವರ ಹೇಳಿಕೆ ವಿಚಾರ
ಅತ್ಯಾಚಾರ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಈ ಹೇಳಿಕೆಯನ್ನು ದೊಡ್ಡದು ಮಾಡುವ ಅಗತ್ಯವಿಲ್ಲ. ಅವರು ಯಾವುದೋ ಸಂದರ್ಭದಲ್ಲಿ ಆ ಮಾತು ಹೇಳಿದ್ದಾರೆ. ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಾಗಾಗಿ ಅದನ್ನು ಮುಂದುವರೆಸುವುದು ಬೇಡ. ಗೃಹ ಸಚಿವರಾಗಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಗಣಪತಿ ಹಬ್ಬದ ಬಗ್ಗೆ
ಇನ್ನು, ಗಣೇಶ ಹಬ್ಬ ಆಚರಣೆ ಕುರಿತು ಮಾತನಾಡಿದ ಯಡಿಯೂರಪ್ಪ, ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಈ ಹಂತದಲ್ಲಿ ವೈಭವದಿಂದ ಗಣೇಶ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಸರಳವಾಗಿ ಆಚರಣೆ ಮಾಡಬೇಕು. ಈ ಬಗ್ಗೆ ನಮ್ಮ ಸರ್ಕಾರ ಚರ್ಚೆ ನಡೆಸಿ ತೀರ್ಮಾನಿಸಲಿದೆ ಎಂದರು.
ರಾಜ್ಯಾದ್ಯಂತ ಪ್ರವಾಸಕ್ಕೆ ಪ್ಲಾನ್
ಬಹಳ ದಿನಗಳ ಬಳಿಕ ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಕೆಲ ದಿನ ಇಲ್ಲಿರುತ್ತೇನೆ. ಕಾರ್ಯಕರ್ತರು ಬಹಳ ಉತ್ಸಾಹದಲ್ಲಿದ್ದಾರೆ. ನಾನು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಮುಂದಿನ ಒಂದೂವರೆ ವರ್ಷ ಪಕ್ಷ ಸಂಘಟನೆಗೆ ಓಡಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ರಿಂದ 150 ಸ್ಥಾನಗಳನ್ನು ಗಳಿಸಬೇಕು. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಪದ್ಮನಾಭ ಭಟ್ ಸೇರಿದಂತೆ ಹಲವರು ಈ ವೇಳೆ ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















