ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 ಮಾರ್ಚ್ 2022
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕನಸಾಗಿಯೇ ಉಳಿಯಲಿದೆ ಅನ್ನುವುದನ್ನ ಪಂಚ ರಾಜ್ಯ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಿಗೆ ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, BJP ನಾಯಕರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ದೇಶದ ಮೂಲೆ ಮೂಲೆಯಲ್ಲೂ ಛಾಪು
ಬಿಜೆಪಿ ಪಕ್ಷವು ದೇಶದ ಮೂಲೆ ಮೂಲೆಯಲ್ಲೂ ಛಾಪು ಮೂಡಿಸಿದೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವು ಪಕ್ಷಗಳು ಅಸ್ತಿತ್ವ ಉಳಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದಿದ್ದಾರೆ.
ಮೋದಿ ಕಾರ್ಯಕ್ಕೆ ಮೆಚ್ಚುಗೆ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಬಲಿಷ್ಠಗೊಳಿಸಿದೆ. ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಉದಾಹರಣೆ ಪಂಚರಾಜ್ಯ ಚುನಾವಣೆ ಫಲಿತಾಂಶ. ಉತ್ತರ ಪ್ರದೇಶ, ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಿದೆ. ಉತ್ತರಖಂಡ, ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರಿಗೈಲಿ ವಾಪಾಸ್ ಆಗಬೇಕಾಯ್ತು
ಸರ್ಕಾರ ರಚನೆ ಮಾಡಲು ಗೋವಾಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಉತ್ತರಖಂಡಕ್ಕೆ ಎಂ.ಬಿ.ಪಾಟೀಲ್ ಅವರು ತೆರಳಿದ್ದರು. ಆದರೆ ಇಬ್ಬರೂ ಬರಿಗೈಲಿ ಹಿಂತಿರುಗಿ ಬರುವಂತಾಗಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ. ಅದು ಕನಸಾಗಿಯೇ ಉಳಿಯಲಿದೆ ಅನ್ನುವುದಕ್ಕೆ ಪಂಚ ರಾಜ್ಯ ಚುನಾವಣೆ ಫಲಿತಾಂಶವೆ ಸಾಕ್ಷಿಯಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















