ಕುಮಾರ್‌ ಬಂಗಾರಪ್ಪ ಮನೆಗೆ ರಾಘವೇಂದ್ರ ಭೇಟಿ, ಅರ್ಧ ಗಂಟೆ ಚರ್ಚೆ, ಬಿಜೆಪಿಗೆ ಕುಮಾರ್‌ ಯಾಕಷ್ಟು ಮುಖ್ಯ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HIGHLITE

  • ಅರ್ಧ ಗಂಟೆ ಚರ್ಚಿಸಿದ ಕುಮಾರ್‌ ಬಂಗಾರಪ್ಪ, ರಾಘವೇಂದ್ರ
  • ಸೊರಬದ ಕುಬಟೂರಿನ ಮನೆಯಲ್ಲಿ ರಾಜಕೀಯ ಚರ್ಚೆ
  • ಎಂಎಲ್‌ಎ ಬಳಿಕ ಪಕ್ಷದ ಚಟುವಟಿಕೆಯಿಂದ ದೂರಾಗಿದ್ದ ಕುಮಾರ್

SHIVAMOGGA LIVE NEWS | 5 APRIL 2024

SORABA : ವಿಧಾನಸಭೆ ಚುನಾವಣೆ ಬಳಿಕ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ನಿವಾಸಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದ್ದರು. ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಸೊರಬದಲ್ಲಿರುವ ಕುಮಾರ್‌ ಬಂಗಾರಪ್ಪ ಅವರ ನಿವಾಸಕ್ಕೆ ಸಂಸದ ರಾಘವೇಂದ್ರ ಭೇಟಿ ನೀಡಿದ್ದರು. ಲೋಕಸಭೆ ಚುನಾವಣೆ, ಸಿದ್ಧತೆ ಮತ್ತು ಪ್ರಚಾರ ಕಾರ್ಯದ ಕುರಿತು ಇಬ್ಬರು ಚರ್ಚೆ ನಡೆಸಿದರು.

ಮತ್ತೆ ಆಕ್ಟೀವ್‌ ಆದ ಕುಮಾರ್‌

ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನಂತರ ಕಾರ್ಯಕರ್ತರ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಕುಮಾರ್‌ ಬಂಗಾರಪ್ಪ ಭಾಗವಹಿಸಿದ್ದರು. ಆ ಬಳಿಕ ಪಕ್ಷದ ಚುಟುವಟಿಕೆಯಿಂದ ದೂರ ಉಳಿದಿದ್ದರು. ಈಚೆಗೆ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಭಾಗವಹಿಸಿದ್ದರು.

ಕುಮಾರ್‌ ಯಾಕಷ್ಟು ಮುಖ್ಯ?

ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಪುತ್ರ ಮತ್ತು ಈಡಿಗ ಸಮುದಾಯದ ನಾಯಕ. ಕುಮಾರ್‌ ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್‌ ಕುಮಾರ್‌ ಅವರು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ. ಈ ಕಾರಣಕ್ಕೆ ಕುಮಾರ್‌ ಬಂಗಾರಪ್ಪ ಪ್ರಚಾರದ ಅಖಾಡಕ್ಕೆ ಧುಮುಕುವುದು ಬಿಜೆಪಿಗೆ ತುರ್ತು ಮತ್ತು ಅನಿವಾರ್ಯ. ಈಡಿಗ ಸಮುದಾಯದ ಬಹುಮತ ಗೀತಾ ಶಿವರಾಜ್‌ ಕುಮಾರ್‌ ಅವರತ್ತ ಹರಿದು ಹೋದರೆ ಬಿಜೆಪಿಗೆ ನಷ್ಟ. ಇದೇ ಕಾರಣಕ್ಕೆ ಚುನಾವಣೆ ಘೋಷಣೆ ಮೊದಲೆ ಬಿಜೆಪಿ ವತಿಯಿಂದ ಈಡಿಗ ಸಮುದಾಯದ ಸಮಾವೇಶ ನಡೆಸಲಾಗಿತ್ತು. ಮಾಜಿ ಸಚಿವ ಹಾಲಪ್ಪ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕುಮಾರ್ ಬಂಗಾರಪ್ಪ ಅವರು ಪ್ರಚಾರ ಆರಂಭಿಸಿದರೆ ಈಡಿಗ ಸಮುದಾಯದ ವಲಯದಲ್ಲಿ ಹೆಚ್ಚು ಜನರನ್ನು ಸುಲಭವಾಗಿ ತಲುಪಬಹುದಾಗಿದೆ ಎಂಬುದು ಬಿಜೆಪಿ ಲೆಕ್ಕಾಚಾರ.

ಕುಮಾರ್‌ ಬಂಗಾರಪ್ಪ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನಂತರ ಸೊರಬ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಗೆ ಇಬ್ಬರು ಒಂದೇ ಕಾರಿನಲ್ಲಿ ತೆರಳಿದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್, ಮುಖಂಡರಾದ ಎಂ.ಡಿ.ಉಮೇಶ್, ಡಿ.ಆರ್.ಸುರೇಶ್, ಸುಧೀರ್ ಪೈ ಇದ್ದರು.

ಇದನ್ನೂ ಓದಿ – ಶಿವಮೊಗ್ಗದ ಸಂಸದನ ಆ ನಿರ್ಧಾರ ಸಾ‍ಮಾನ್ಯದ್ದಲ್ಲ, ಸಂಸತ್‌ ಇತಿಹಾಸದಲ್ಲೇ ಮೊದಲು, ಆಮೇಲೆ ಅವರು ಸಿಎಂ ಆದರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 5, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment