ಕುಂತಲ್ಲಿ, ನಿಂತಲ್ಲಿ ಹಣ ತಂದೆ ಅಂತಿದಾರೆ, ಪಾದಯಾತ್ರೆ ಮಾಡಿ ಸುಮ್ಮನೆ ಕೂತರೆ ಆಗಲ್ಲ, ಮಧು ವಿರುದ್ಧ ರಾಘವೇಂದ್ರ ಟಾಂಗ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪಾದಯಾತ್ರೆ ಮಾಡಿದಾಕ್ಷಣ ಜವಾಬ್ದಾರಿ ಮುಗಿಯುವುದಿಲ್ಲ. ಪಟ್ಟು ಹಿಡಿದು ಕೆಲಸ ಮಾಡಿಸಬೇಕು ಅಂತಾ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಶಿವಮೊಗ್ಗ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ, ಅಭ್ಯರ್ಥಿಯಾದ ಬಳಿಕ ಕುಂತಲ್ಲಿ, ನಿಂತಲ್ಲಿ ನೀರಾವರಿ ಯೋಜನೆಗೆ ಹಣ ತಂದೆ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆ ಮಾಡಿ ಸುಮ್ಮನೆ ಕುಳಿತರೆ ಸಾಲದು ಅಂದರು.‌

ಸರ್ಕಾರದ ಪತ್ರದಲ್ಲೇ‌ ನಮ್ಮನ್ನು ಹೊಗಳಿದ್ದಾರೆ

ಜಿಲ್ಲೆಯ ಏತ ನೀರಾವರಿ ಯೋಜನೆ ಕುರಿತು ಕೇಂದ್ರದ ನೀರಾವರಿ ಸಚಿವೆ ಉಮಾ ಭಾರತಿ ಅವರಿಗೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ತಂಡವೊಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿತ್ತು. ಇದೇ ವಿಚಾರ ಸಂಬಂಧ ಸಿದ್ದರಾಮಯ್ಯ ಅವರ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನವನ್ನೂ ಮಾಡಿದೆವು‌. ಆದರೆ ಅವರ ಸರ್ಕಾರ ಕುಂಭಕರ್ಣ ನಿದ್ರೆಯಿಂದ ಏಳಲಿಲ್ಲ. ನಂತರ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೆವು ಎಂದರು.

ಸರ್ಕಾರದ ಪತ್ರದಲ್ಲಿ ಶಿವಮೊಗ್ಗದ ಸಂಸದರು, ಶಿಕಾರಿಪುರದ ಶಾಸಕರು ಮನವಿ ಮೇರೆಗೆ ಎಂದು ಪ್ರಸ್ತಾಪಿಸಲಾಗಿದೆ ಅಂತಾ ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment