ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019
ಹೆಲಿಕಾಪ್ಟರ್’ನಲ್ಲಿ ತೆರಳಿ ಶಿಕಾರಿಪುರ ವಿಧಾನಸಭೆ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ವಿನಯ್ ರಾಜವತ್, ಎತ್ತಿನಗಾಡಿಯಲ್ಲಿ ಬಂದು ಲೋಕಸಭೆ ಚುನಾವಣೆಗೆ ನಾಮಿನೇಷನ್ ಮಾಡಿದ್ದಾರೆ. ಅಷ್ಟೇ ಅಲ್ಲ, ಮೂಟೆಯಲ್ಲಿ ನಾಣ್ಯಗಳನ್ನು ತಂದು ಠೇವಣಿ ಹಣ ಕಟ್ಟಿದ್ದಾರೆ.
ಇವತ್ತು ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜವತ್ ನಾಮಪತ್ರ ಸಲ್ಲಿಸಿದ್ದಾರೆ. ಅಡಕೆ ಹಾಳೆ ಟೋಪಿ, ಮಲೆನಾಡು ಶೈಲಿಯ ಬಟ್ಟೆ ತೊಟ್ಟು, ಎತ್ತಿನಗಾಡಿಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ನಾಮಪತ್ರ ಸಲ್ಲಿಸಲು ತೆರಳುವಾಗ ಮೂಟೆ ಹಿಡಿದು ಜಿಲ್ಲಾಧಿಕಾರಿ ಕಚೇರಿ ಒಳಗೆ ಹೋಗುತ್ತಿದ್ದಂತೆ ಪೊಲೀಸರು ತಡೆದು ತಪಾಸಣೆಗೊಳಪಡಿಸಿದರು. ಅದರಲ್ಲಿ 20 ಕೆಜಿಯಷ್ಟು ನಾಣ್ಯಗಳು ಪತ್ತೆಯಾದವು. ಚುನಾವಣಾ ಠೇವಣಿಗಾಗಿ ಹಣ ತಂದಿರುವುದಾಗಿ ಸ್ಪಷ್ಟಪಡಿಸಿದರು.
ಆಲ್ ದಿ ಬೆಸ್ಟ್ ಹೇಳಿದ ಸಿಎಂ
ವಿನಯ್ ರಾಜವತ್, ನಾಮಪತ್ರ ಸಲ್ಲಿಸಿ ಜಿಲ್ಲಾಧಿಕಾರಿ ಕಚೇರಿಯಿಂದ ಕೆಳಗಿಳಿಯುತ್ತಿದ್ದಂತೆ, ಮುಖ್ಯಮಂತ್ರಿ ಕುಮಾರಸ್ವಾಮಿ ಎದುರಾದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ, ವಿನಯ್ ರಾಜವತ್ ಅವರೊಂದಿಗೆ ಮಾತನಾಡಿದ ಸಿಎಂ, ಒಳ್ಳೆಯದಾಗಲಿ ಎಂದು ವಿಷ್ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200