Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಇಲ್ಲಿ ಯಾರು ನಮ್ಮವರು?’ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು, ಕಾರಣವೇನು?

‘ಇಲ್ಲಿ ಯಾರು ನಮ್ಮವರು?’ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು, ಕಾರಣವೇನು?

26/03/2024 10:10 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 26 MARCH 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಬಿರುಸಾಗಿದೆ. ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಬಂಡಾಯ ಅಭ್ಯರ್ಥಿ ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಮೂವರು ಅಭ್ಯರ್ಥಿಗಳಿಗು ಒಳ ಪೆಟ್ಟಿನ ಆತಂಕ ಎದುರಾಗಿದೆ. ‘ಇಲ್ಲಿ ಯಾರು ನಮ್ಮವರು?’ ಎಂದು ಪ್ರಶ್ನಿಸಿಕೊಳ್ಳುವಂತ ಸನ್ನಿವೇಶ ಎದುರಾಗಿದೆ.

ಆತಂಕ, ಅನುಮಾನದಲ್ಲೇ ಅಭ್ಯರ್ಥಿಗಳು

Shimoga-Live-Special-logoತಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಬೇಕು ಎಂದು ನಾಯಕರು ಕೈಗೊಳ್ಳುವ ನಿರ್ಧಾರಗಳು ಲಾಭದ ಜೊತೆಗೆ ಸಣ್ಣ ಪ್ರಮಾಣದ ನಷ್ಟವನ್ನೂ ಉಂಟು ಮಾಡುತ್ತದೆ. ಮತ್ಯಾವುದೋ ಕ್ಷೇತ್ರದ ಅಭ್ಯರ್ಥಿ ವಿಚಾರ ಈ ಕ್ಷೇತ್ರದಲ್ಲಿ ಪರಿಣಾಮ ಬೀರುತ್ತದೆ. ಮುನಿಸು, ಬಂಡಾಯಕ್ಕು ಕಾರಣವಾಗುತ್ತದೆ. ಇಂತಹ ಹಲವು ಬೆಳವಣಿಗೆಗಳು ಈಗ ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಕಾಣಸಿಗುತ್ತಿದೆ. ಇದೇ ಕಾರಣಕ್ಕೆ ಅಭ್ಯರ್ಥಿಗಳು ತಮ್ಮವರಾರು, ಜೊತೆಗಿದ್ದು ಒಳ ಪೆಟ್ಟು ನೀಡುವವರಾರು ಎಂದು ಅನುಮಾನ, ಆತಂಕದಲ್ಲೇ ಹೆಜ್ಜೆ ಇಡುವಂತಾಗಿದೆ.

ಬಿಜೆಪಿಯಲ್ಲಿ ಹೇಗಿದೆ ಪರಿಸ್ಥಿತಿ?

BJP-Office-Shimoga

ಹಾವೇರಿಯಲ್ಲಿ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಿದ್ದರಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಗೆಲ್ಲಬಾರದೆಂದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ. ಇದು ಬಿಜೆಪಿಯಲ್ಲಿದ್ದ ಯಡಿಯೂರಪ್ಪ ವಿರೋಧಿ ಬಣವನ್ನು ಸಕ್ರಿಯಗೊಳಿಸಿದೆ. ಒಂದಷ್ಟು ಮಂದಿ ಬಹಿರಂಗವಾಗಿ ಈಶ್ವರಪ್ಪ ಅವರೊಂದಿಗೆ ಪ್ರಚಾರಕ್ಕಿಳಿದಿದ್ದಾರೆ. ಇನ್ನೂ ಹಲವರು ಪಕ್ಷದೊಳಗೆ ಇದ್ದು ಅತಂರಿಕ ಬೆಂಬಲ ನೀಡುವ ಭರವಸೆ ನೀಡಿದ್ದಾರಂತೆ. ಇಲ್ಲಿದ್ದು ಅಲ್ಲಿಗೆ ಬೆಂಬಲ ನೀಡುವವರು ಒಳ ಪೆಟ್ಟು ನೀಡುವ ಸಾಧ್ಯತೆ ಇದೆ. ಇದು ರಾಘವೇಂದ್ರ ಅವರನ್ನು ಚಿಂತೆಗೀಡು ಮಾಡಿದೆ.

ಕಾಂಗ್ರೆಸ್‌ನಲ್ಲಿ ಹೇಗಿದೆ ಸ್ಥಿತಿ?

-Congress-Party-Office-Shimoga

ಕಾಂಗ್ರೆಸ್‌ ಪಕ್ಷದಲ್ಲಿಯು ಒಳ ಪೆಟ್ಟಿನ ಆತಂಕ ಎದುರಾಗಿದೆ. ಹೊರಗಿನಿಂದ ಬಂದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಈಗಾಗಲೆ ಹಲವರು ಮುನಿಸಿಕೊಂಡಿದ್ದಾರೆ. ಇದೇ ವಿಚಾರವಾಗಿ ಶಿಕಾರಿಪುರ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾ ಕಚೇರಿ ಮುಂಭಾಗ ಪ್ರತಿಭಟನೆಯನ್ನೂ ನಡೆಸಿದ್ದರು. ಇನ್ನು, ಲೋಕಸಭೆ ಚುನಾವಣೆ ಬಳಿಕ ನಡೆಯುವ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಆಯನೂರು ಮಂಜುನಾಥ್‌ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಇದರಿಂದ ವೀರಶೈವ ಲಿಂಗಾಯತ ಸಮುದಾಯದ ಮತಗಳನ್ನು ಗಳಿಸಲು ಅನುಕೂಲ ಎಂದು ರಾಜ್ಯ ನಾಯಕರು ಲೆಕ್ಕಾಚಾರ ಹಾಕಿದ್ದರು. ಆದರೆ ಟಿಕೆಟ್‌ ಘೋಷಿಸಿದ ಬೆನ್ನಿಗೆ ಪಕ್ಷದೊಳಗಿನ ಅದೇ ಸಮುದಾಯದ ಮುಖಂಡರು ಅಸಮಾಧಾನಗೊಂಡಿದ್ದಾರೆ. ಎಸ್‌.ಪಿ.ದಿನೇಶ್‌ ಅವರು ನೈಋತ್ಯ ಪದವೀಧರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್‌ ಕೈ ತಪ್ಪಿದ್ದು ಸಹಜವಾಗಿ ಮೂಲ ಕಾಂಗ್ರೆಸಿಗರಲ್ಲಿ ಅಸಮಾಧಾನ ಮೂಡಿಸಿದೆ. ಇದು ಲೋಕಸಭೆ ಚುನಾವಣಾ ಪ್ರಚಾರದ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ.

ಈ‍ಶ್ವರಪ್ಪ ಬಣದಲ್ಲಿಯು ಆತಂಕ

130324 Eshwarappa Enter his car in SHIMOGA

ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರಿಗು ಒಳ ಏಟಿನ ಆತಂಕವಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿದ್ದವರು, ಪಕ್ಷಕ್ಕೆ ಬೆಂಬಲವಾಗಿದ್ದವರೆಲ್ಲ ಈಶ್ವರಪ್ಪ ಅವರೊಂದಿಗೆ ಕಾಣಿಸಿಕೊಂಡಿದ್ದರು. ಇವರಲ್ಲಿ ಹಲವರು ಅತ್ತ ಧರಿ, ಇತ್ತ ಪುಲಿ ಅನ್ನುವ ಸ್ಥಿತಿಗೆ ತಲುಪಿದ್ದಾರೆ. ಈಶ್ವರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಡಲು ಹೋದರೆ ಬಿಜೆಪಿ ಮತ್ತು ರಾಘವೇಂದ್ರ ಅವರ ಕೆಂಗಣ್ಣಿಗೆ ಗುರಿಯಾಗಬಹುದು. ಈಶ್ವರಪ್ಪ ಅವರೊಂದಿಗೆ ಪ್ರಚಾರಕ್ಕೆ ಹೋಗದಿದ್ದರೆ ಅವರ ವಿಶ್ವಾಸ ಕಳೆದುಕೊಳ್ಳಬಹುದು ಎಂದು ಚಿಂತೆಗೀಡಾಗಿದ್ದಾರೆ. ಇದು ಸಹಜವಾಗಿಯೆ ಈಶ್ವರಪ್ಪ ಅವರ ನಿದ್ದೆಗೆಡಿಸಿದೆ.

ಇದನ್ನೂ ಓದಿ – ಲೋಕಸಭೆ ಚುನಾವಣೆ | ಶಿವಮೊಗ್ಗದಲ್ಲಿ ಎಷ್ಟು ಮತದಾರರಿದ್ದಾರೆ? ಪುರುಷರೆಷ್ಟು? ಮಹಿಳೆಯರೆಷ್ಟು? ಇಲ್ಲಿದೆ ಡಿಟೇಲ್ಸ್‌

ಸದ್ಯ ಶಿವಮೊಗ್ಗದ ಮೂವರು ಅಭ್ಯರ್ಥಿಗಳಿಗು ಒಳ ಪೆಟ್ಟು ಮತ್ತು ಒಳ ಪಟ್ಟಿನ ಆತಂಕವಿದೆ. ಇದೆ ಕಾರಣಕ್ಕೆ ಇಲ್ಲಿ ಯಾರು ನಮ್ಮವರು ಎಂದು ಯೋಚಿಸುವಂತಾಗಿದೆ. ಅಲ್ಲದೆ ಪ್ರತಿ ಹೆಜ್ಜೆ ಇಡುವಾಗಲು ಹತ್ತಾರು ಬಾರಿ ಯೋಚಿಸುವಂತಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ಶಿವಮೊಗ್ಗ KSRTC ನಿಲ್ದಾಣದಲ್ಲಿ ವ್ಯಕ್ತಿ ಸಾವು | ರೈಲಿಗೆ ಸಿಲುಕಿ ವ್ಯಕ್ತಿ ಮೃತ | ಡಿಕ್ಕಿ ಹೊಡೆಸಿ ಕಾರು ಬಿಟ್ಟು ಚಾಲಕ ಪರಾರಿ
Next Article 260324 Holi Celebration in Shimoga city ಶಿವಮೊಗ್ಗದಲ್ಲಿ ಅದ್ಧೂರಿ ಹೋಳಿ ಆಚರಣೆ, ಡಿಜೆಗೆ ಭರ್ಜರಿ ರೈನ್‌ ಡಾನ್ಸ್‌, ಹೇಗಿತ್ತು? ಇಲ್ಲಿವೆ ಫೋಟೊಗಳು

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
Madhu-Bangarappa-Minister
POLITICS

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/03/2025
Dr-Dhananjaya-Sarji-in-session.
POLITICSSHIVAMOGGA CITY

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
DS-Arun-speaks-at-session
POLITICSSHIVAMOGGA CITY

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?