ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಹೇಳಿಕೆ, ‘ಇನ್ನೆರಡು ದಿನ ನಡೆಯಲಿದೆ ಮಹತ್ವದ ಸಭೆʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 APRIL 2023

SHIMOGA  : ಎರಡು ದಿನದ ಸಭೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (Candidate List) ಬಿಡುಗಡೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Chief-Minister-Basavaraja-Bommai-at-Tuduru-Village-in-Thirthahalli

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿಯಲ್ಲಿ ಕೆಳ ಹಂತದ ಕಾರ್ಯಕರ್ತರು, ಜನರ ಭಾನವೆಗಳನ್ನು ಅರಿತು ಅಭ್ಯರ್ಥಿಗಳ (Candidate List) ಆಯ್ಕೆ ಮಾಡಲಾಗುತ್ತಿದೆ. ಜಿಲ್ಲೆ, ತಾಲೂಕು ಹಂತದ ಸಮಿತಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಇನ್ನೆರಡು ದಿನದ ಸಭೆ ಬಳಿಕ ಅಭ್ಯರ್ಥಿಗಳನ್ನು ಪ್ರಕಟಿಸಲಾಗುತ್ತದೆ ಎಂದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಉದ್ಘಾಟನಾ ಕಾರ್ಯಕ್ರಮಕ್ಕೆ ಬಳಕೆಯಾದ KSRTC ಬಸ್ಸುಗಳೆಷ್ಟು? ಅವುಗಳ ಬಾಡಿಗೆ ಕಟ್ಟಿದ್ಯಾರು?

ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 60 ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿ ಇಲ್ಲ. ಬೇರೆಡೆ ಅಭ್ಯರ್ಥಿಗಳನ್ನು ಕರೆದುಕೊಂಡು ಟಿಕೆಟ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಹೊರಗೆ ಶೂರುತ್ವದ ಮಾತನಾಡುತ್ತಿದ್ದಾರೆ. ಆದರೆ ಅವರಿಗೆ ಅಭ್ಯರ್ಥಿಗಳಿಲ್ಲ. ಸ್ಪಷ್ಟ ನೀತಿಗಳು ಇಲ್ಲ. ಕೇವಲ ಉಡಾಫೆ ಮಾತುಗಳಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷ ಕಳೆದ ಬಾರಿಗಿಂತಲೂ ಹೀನಾಯವಾಗಿ ಸೋಲನುಭವಿಸಲಿದೆ ಎಂದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್‌ಪೋಸ್ಟ್‌ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2023

Leave a Comment