ಮೋದಿ ಪ್ರಧಾನಿ ಆಗ್ತಾರೆ ಅಂತಾ ಭವಿಷ್ಯ ಹೇಳಿದ್ದ ಸ್ವಾಮೀಜಿಗೆ ಸಂಕಷ್ಟ, ಶಿವಮೊಗ್ಗದಲ್ಲಿ ಕಂಪ್ಲೇಂಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಅಂತಾ ಭವಿಷ್ಯ ನುಡಿದಿದ್ದ, ಕೋಡಿ ಮಠದ ಸ್ವಾಮೀಜಿ ವಿರುದ್ಧ, ಶಿವಮೊಗ್ಗದಲ್ಲಿ ದೂರು ನೀಡಲಾಗಿದೆ. ಚುನಾವಣಾಧಿಕಾರಿ ಅವರನ್ನು ಭೇಟಿಯಾದ ಜಿಲ್ಲಾ ಕಾಂಗ್ರೆಸ್’ನ ಪ್ರಮುಖರು, ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಅವರು ವಿರುದ್ಧ ದೂರು ನೀಡಿದ್ದಾರೆ.

53877525 806508656377223 6622702685529309184 n.jpg? nc cat=107& nc ht=scontent.fblr10 1

ಮಾರ್ಚ್ 11ರಂದು, ರಾಯಚೂರಿನಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರು, ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಮಾರ್ಚ್ 10ರಿಂದಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಿದ್ದೂ, ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸಿಗರು ಮನವಿ ಮಾಡಿದ್ದಾರೆ.

ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಪ್ರಮುಖರಾದ ವಿನೋದ್, ಮೊಹಮ್ಮದ್ ಅಕ್ಬರ್, ಕಿರಣ್, ಅರ್ಜುನ್, ಕವಿತಾ ಮತ್ತಿತರರು ಇದ್ದರು.

53711563 578096959336885 7523900310150971392 n.jpg? nc cat=102& nc ht=scontent.fblr10 1

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

Congress leaders file a complaint against Kodi Mutt Swamji over his fortune, at Shivamogga. Recently Seer had predicted that Narendra Modi will be the Prime Minister again. This has irked Congress and other party leaders and a complaint has been filed at Shivamogga.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment