SHIVAMOGGA LIVE NEWS | 19 MARCH 2024
SHIMOGA : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಾವು ಪಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಅಖಾಡಕ್ಕೆ ಧುಮುಕಲು ಸಿದ್ಧತೆ ನಡೆಸಿದ್ದಾರೆ. ಮಾ.20ರಂದು ಗೀತಾ ಶಿವರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾ.20ರಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಭದ್ರಾವತಿಯ ಬಾರಂದೂರಿನಲ್ಲಿ ಸ್ವಾಗತಿಸಲಾಗುತ್ತದೆ. ಅಲ್ಲಿಂದ ಅದ್ಧೂರಿ ರಾಲಿ ನಡೆಸಲಾಗುತ್ತದೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ಸಚಿವ ಮಧು ಬಂಗಾರಪ್ಪ, ನಟ ಶಿವರಾಜ್ ಕುಮಾರ್ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುಳ್ಳು, ಸತ್ಯದ ನಡುವಿನ ಚುನಾವಣೆ
‘ಈ ಬಾರಿ ಕ್ಷೇತ್ರದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಚುನಾವಣೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ನಾವು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಿಗದಿತ ಜನ ಸೇರಿಲ್ಲ. ಹಣ ಕೊಟ್ಟು ಜನರನ್ನು ಕರೆಯಿಸಲಾಗಿತ್ತು. ಆದರೂ ಕಾರ್ಯಕ್ರಮ ಯಶಸ್ವಿಯಾಗಿಲ್ಲ. ಇನ್ನು, ಈಶ್ವರಪ್ಪ ಬಂಡಾಯದಿಂದ ಕಾಂಗ್ರೆಸ್ಗೆ ಲಾಭವಾಗಲಿದೆ. ಈ ಬಾರಿ ಗೀತಾ ಶಿವರಾಜ್ ಕುಮಾರ್ ಅವರು ಗೆಲುವು ಸಾಧಿಸುತ್ತಾರೆ’ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಯನೂರು ಮಂಜುನಾಥ್, ಪ್ರಸನ್ನ ಕುಮಾರ್, ಚಂದ್ರ ಭೂಪಾಲ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್