ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಮೇಲುಸ್ತುವಾರಿಗೆ ಸರ್ಕಾರ ಸಮಿತಿ ರಚಿಸಿರುವುದನ್ನು ರದ್ದಗೊಳಿಸಬೇಕು. ಇಲ್ಲವಾದಲ್ಲಿ ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಎಚ್ಚರಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಕೆ.ಹರಿಪ್ರಸಾದ್, ಚೌಡಿ, ಚೌಡಮ್ಮ ದೇವರನ್ನು ಹಿಂದುಳಿದ ವರ್ಗದವರು ಪೂಜಿಸುತ್ತಿರುವ ದೇವರು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಮಿತಿ ರಚಿಸಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗದ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿದರು.
VIDEO REPORT
ಸಿಗಂದೂರು ದೇವಸ್ಥಾನದ ಮೇಲುಸ್ತುವಾರಿಗೆ ರಚನೆ ಮಾಡಿರುವ ಸಮಿತಿಯನ್ನು ರದ್ದುಗೊಳಿಸಬೇಕು. ಒಂದು ವೇಳೆ ಸರ್ಕಾರ ತನ್ನ ಯೋಚನೆ ಬದಲಿಸದ ಹೋದರೆ ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ಅದರ ನೇತೃತ್ವವನ್ನು ನಾನೆ ವಹಿಸಿಕೊಳ್ಳುತ್ತೇನೆ ಎಂದು ಬಿ.ಕೆ.ಹರಿಪ್ರಸಾದ್ ತಿಳಿಸಿದರು.
ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್, ಕಾಂಗ್ರೆಸ್ ಮುಖಂಡ ರಮೇಶ್, ಪ್ರಮುಖರಾದ ಮಂಜುನಾಥ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]