SHIVAMOGGA LIVE NEWS | 19 AUGUST 2023
SHIMOGA : ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಪಕ್ಷ (JDS Party) ಕೋರ್ ಕಮಿಟಿ (Core Team) ರಚನೆ ಮಾಡಿದೆ. ಮಾಜಿ ಸಚಿವ ಜಿ.ಟಿ.ದೇವೇಗೌಡ ಇದರ ಅಧ್ಯಕ್ಷರಾಗಿದ್ದಾರೆ. ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರನಸ್ನ ಕುಮಾರ್ ಅವರನ್ನು ಕೋರ್ ಕಮಿಟಿಗೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ ಹತ್ತಿ ವ್ಯಾನಿಟಿ ಬ್ಯಾಗ್ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ
ಜೆಡಿಎಸ್ ಪಕ್ಷ 21 ನಾಯಕರ ಕೋರ್ ಕಮಿಟಿ ಸಿದ್ಧಪಡಿಸಿದೆ. ಹಾಲಿ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪ್ರಮುಖ ನಾಯಕರ ತಂಡ ರಚಿಸಲಾಗಿದೆ. ವೈ.ಎಸ್.ವಿ. ದತ್ತ ಅವರು ಕೋರ್ ಕಮಿಟಿಯ ಸಂಚಾಲಕರಾಗಿದ್ದಾರೆ. ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಈ ಸಮಿತಿ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200