| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 1 MAY 2024
ELECTION NEWS : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಶಿವಮೊಗ್ಗ ಲೋಕಸಭೆ ಚುನಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್, ತಮ್ಮ ವಿರುದ್ಧ ಮಾಧ್ಯಮಗಳು ಮಾನಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
50 ಮಾಧ್ಯಮಗಳ ಹೆಸರು
ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ದೃಶ್ಯ, ಪತ್ರಿಕೆ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಮಾನಹಾನಿಕರ ಸುದ್ದಿ, ಫೋಟೊ ಪ್ರಕಟಿಸದಂತೆ ಕೋರ್ಟ್ನಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ. 50 ಮಾಧ್ಯಮಗಳನ್ನು ಪ್ರತಿವಾದಿಗಳನ್ನಾಗಿ ಮಾಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನ ನ್ಯಾಯಾಧೀಶರು, ಕೆ.ಇ.ಕಾಂತೇಶ್ ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ಏಪ್ರಿಲ್ 27ರಂದು ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದ್ದಾರೆ.
ಕಾಂತೇಶ್ ಅವರ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿಕೆ ಮಾಡಲಾಗಿದೆ. ಸದ್ಯ ಈ ಬೆಳವಣಿಗೆ ಶಿವಮೊಗ್ಗ ರಾಜಕಾರಣ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಚರ್ಚೆಗು ಕಾರಣವಾಗಿದೆ.
ಇದನ್ನೂ ಓದಿ – ಈಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್ ಸ್ಮರಿಸಿದ ಈಶ್ವರಪ್ಪ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
- ದಿನ ಪಂಚಾಂಗ, ಇಂದಿನ ರಾಶಿ ಭವಿಷ್ಯ – ಓದಲು ಇಲ್ಲಿ ಕ್ಲಿಕ್ ಮಾಡಿ
- ಭದ್ರಾವತಿಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗದಲ್ಲಿ ಸಾವು
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ನಾಳೆ ಉತ್ಸವ್ ಮೇಳ, ಏನೇನೆಲ್ಲ ಇರುತ್ತೆ?
- ಅಡಿಕೆ ಧಾರಣೆ | 11 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?
- ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?
- ಭದ್ರಾವತಿ ಆಕಾಶವಾಣಿಯಲ್ಲಿ ಹೆಲ್ತ್ ಹಿಂಟ್ಸ್, ಬದುಕು ಜಟಕಾಬಂಡಿ ಕಾರ್ಯಕ್ರಮ, ಟೈಮಿಂಗ್ ಏನು?
![]()