ಶಿವಮೊಗ್ಗಕ್ಕೆ ಕೇಂದ್ರ ರಕ್ಷಣಾ ಸಚಿವೆ, ಸೆಲ್ಫಿಗೆ ಮುಗಿಬಿದ್ರು ಬಿಜೆಪಿ ಕಾರ್ಯಕರ್ತರು, ಸಮಾವೇಶದಲ್ಲಿ ಏನೆಲ್ಲ ಹೇಳಿದ್ರು ಗೊತ್ತಾ ಮಿನಿಸ್ಟರ್?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | 15 ಏಪ್ರಿಲ್ 2019

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಪ್ರಚಾರ ನಡೆಸಲು, ರಕ್ಷಣ ಸಚಿವೆ ನಿರ್ಮಲಾ ಸೀತಾರಾಮನ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಎನ್ಇಎಸ್ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಅವರು ಪಾಲ್ಗೊಂಡಿದ್ದರು.

ಇಂದಿರಾ ಕಾಲದಿಂದಲೂ ಗರೀಭಿ ಹಠಾವೋ

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಮೋದಿ ಅವರಂತಹ ಅಪರೂಪದ ಮಾಣಿಕ್ಯ ನಮಗೆ ಸಿಕ್ಕಿದೆ. ಅವರು ತಮ್ಮನ್ನು ಪ್ರಧಾನ ಮಂತ್ರಿ ಅನ್ನದೆ, ಪ್ರಧಾನ ಸೇವಕ ಎಂದು ಹೇಳಿಕೊಳ್ಳುತ್ತಿದ್ದಾರೆ. ಅಂತಹ ಮಾಣಿಕ್ಯವನ್ನು ಪ್ರಧಾನ ಮಂತ್ರಿಯಾಗಿ ಉಳಿಸಿಕೊಳ್ಳಬೇಕಿದೆ ಎಂದರು.

56990314 825168234511265 8543177314567979008 n.jpg? nc cat=111& nc eui2=AeFySiPe56rxfpX1jEOLJKgr3kPBXU0vMGDGex9fH2m5gvQ0GL34GkTb8cZt4QDvG l71zMxeY2bzGRf f982zGWSd4lFRcxM1Qc4hClD5eAlA& nc oc=AQk1QHtr a1Yp63gX dyFkgWc0dNWWAXxpBxFJUiPCF6TRdahFKejjB5z9zWf2zLJwo& nc ht=scontent.fblr10 1

ಇನ್ನು, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ನಿರ್ಮಲಾ ಸೀತಾರಾಮನ್, 1971ರಿಂದ ಇಂದಿರಾ ಗಾಂಧಿ ಗರೀಭಿ ಹಠಾವೋ ಘೋಷಣೆ ಪ್ರಾರಂಭಿಸಿದರು. ರಾಜೀವ್ ಗಾಂಧಿ ಕಾಲದಲ್ಲೂ ಅದನ್ನೇ ಹೇಳಿದರು. ಮನಮೋಹನ್ ಸಿಂಗ್ ಅವರ ಅವಧಿಯಲ್ಲೂ ಇದೇ ಘೋಷಣೆಯಾಯ್ತು. ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಸಮೀಪಿಸಿದಾಗ ಮಾತ್ರವೇ ಬಡವರು ಮತ್ತು ಬಡತನದ ನೆನಪಾಗುತ್ತದೆ ಎಂದು ಟೀಕಿಸಿದರು.

2008ರಲ್ಲಿ ಮುಂಬೈ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು. ಆಗ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೆ, ಭಯೋತ್ಪಾದಕರಿಂದ ಭಾರತಕ್ಕೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಸೇನೆಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಹಾಗಾಗಿಯೇ ಸರ್ಜಿಕಲ್ ದಾಳಿಯಾಗಿದ್ದು ಎಂದರು.

57154708 825168224511266 7439707986097864704 n.jpg? nc cat=101& nc eui2=AeHLP7OAOsIVy1v0ivTQw7oevxXoW9KZEwpLaGOnVME8cSKfcWpBuXJbKx10 XnVE u7KX4OfF3SPFgZOvUZx6 fkWwfbvzhbZWlaTQqfWFpqw& nc oc=AQmoQy SK g7N qRljNulyNU7oYOkTRjjB6O0UN6 dX7Kk Vc80ctl9LwnocfJcyQhA& nc ht=scontent.fblr10 1

ವೇದಿಕೆ ಮುಂದೆ ಯಡಿಯೂರಪ್ಪ, ಈಶ್ವರಪ್ಪ ಕುಟುಂಬ

ಇನ್ನು, ಮಹಿಳಾ ಸಮಾವೇಶದಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ಕುಟುಂಬದ ಮಹಿಳೆಯರು ಕೂಡ ಪಾಲ್ಗೊಂಡಿದ್ದರು. ಯಡಿಯೂರಪ್ಪ ಪುತ್ರಿಯರಾದ ಅರುಣಾದೇವಿ, ಉಮಾದೇವಿ, ಪದ್ಮಾವತಿ, ಬಿ.ವೈ.ರಾಘವೇಂದ್ರ ಪತ್ನಿ ತೇಜಸ್ವಿನಿ, ವಿಜಯೇಂದ್ರ ಪತ್ನಿ ಪ್ರೇಮಾ, ಈಶ್ವರಪ್ಪ ಪತ್ನಿ ಜಯಲಕ್ಷ್ಮಿ ಸೇರಿದಂತೆ ಕುಟುಂಬದ ಮಹಿಳೆಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದು ಗಮನ ಸೆಳಯಿತು.

57116418 825168227844599 601760111131623424 n.jpg? nc cat=104& nc eui2=AeEYLxcfxbfeq9fQjLy9l CJ1Hs9 wY q3 efLXH2hnQJCrC73nmMajXSEFy uKtVbyDMpE73DbDT5wCxJqT PLO4YsxQeeA69Z szxtqnmZkw& nc oc=AQnOiLSg5dNC24rXbQ6DYVW5UUgUVDXsMrQ5CqNwGP6xIllNTuv n9KbHOGH PFxyjs& nc ht=scontent.fblr10 1

ಸೆಲ್ಫಿಗೆ ಫುಲ್ ರಶ್

ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗಿಳಿಯುತ್ತಿದ್ದ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಕಾರ್ಯಕರ್ತರು ಮುಗಿಬಿದ್ದರು. ಇವರಿಂದ ರಕ್ಷಣ ಸಚಿವರಿಂದ ರಕ್ಷಸಿ, ಕಾರಿನತ್ತ ಕರೆದೊಯ್ಯಲು ರಕ್ಷಣಾ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು.

ಸಮಾವೇಶದಲ್ಲಿ ಶಾಸಕರಾದ ಈಶ್ವರಪ್ಪ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ, ರುದ್ರೇಗೌಡ, ಆಯನೂರು ಮಂಜುನಾಥ್, ಪ್ರಮುಖರಾದ ಡಿ.ಹೆಚ್.ಶಂಕರಮೂರ್ತಿ, ಭಾರತಿ ಶೆಟ್ಟಿ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment