ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ನಡು ರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಪ್ಪನಾಯಕ ಪ್ರತಿಮೆ ಬಳಿ ನಡು ರಸ್ತೆಯಲ್ಲೇ ಒಲೆ ಹಚ್ಚಿ ವಿಭಿನ್ನವಾಗಿ ಪ್ರತಿಭಟಿಸಲಾಯಿತು. ಬೋಂಡ ಕರೆದು, ಟೀ ಮಾಡಿ ಎಲ್ಲರಿಗೂ ಹಂಚಿ ಪ್ರತಿಭಟನೆ ನಡೆಸಲಾಯಿತು.
ತರಕಾರಿ ನೆಕ್ಲೆಸ್ ತೊಟ್ಟು ಆಕ್ರೋಶ
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು ತರಕಾರಿಯನ್ನೇ ನೆಕ್ಲೆಸ್ ರೀತಿ ತೊಟ್ಟಿದ್ದರು. ತರಕಾರಿಗೆ ಚಿನ್ನದಷ್ಟು ಬೆಲೆ ಬಂದಿದೆ. ಹಾಗಾಗಿ ತರಕಾರಿ ಸರವನ್ನು ತೊಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ
ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ ಈತನಕ ಸರ್ಕಾರ ಕ್ರಮ ಕೈಗೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.
VIDEO REPORT
ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ.ಯೋಗೇಶ್, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಇಸ್ಮಾಯಿಲ್ ಖಾನ್, ಎಲ್.ರಾಮೇಗೌಡ, ಎಸ್.ಪಿ.ಶೇಷಾದ್ರಿ, ಎನ್.ರಮೇಶ್, ವೈ.ಹೆಚ್.ನಾಗರಾಜ್, ವಿಶ್ವನಾಥ ಕಾಶಿ, ವಿಜಯಲಕ್ಷ್ಮೀ ಪಾಟೀಲ್, ಎನ್.ಡಿ.ಪ್ರವೀಣ್ ಕುಮಾರ್, ಚಂದನ್, ಸೌಗಂಧಿಕಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]