‘ಡಾ.ಧನಂಜಯ ಸರ್ಜಿ ಗೆಲುವು ನಿಶ್ಚಿತ’, ನಾಮಪತ್ರ ಸಲ್ಲಿಕೆ ದಿನಾಂಕ ಫಿಕ್ಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 13 MAY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಕಳೆದ ಆರು ಅವಧಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೆ ಗೆಲುವು ಸಾಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಗೆಲ್ಲಲ್ಲಿದ್ದಾರೆ. ಮೇ 16ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್‌, ಆರ್‌ಎಸ್‌ಎಸ್‌ ಸ್ವಯಂ ಸೇವಕ, ಸಾಮಾಜಿಕ ಚಟುವಟಿಕೆ, ವೈದ್ಯರಾಗಿ ಡಾ. ಧನಂಜಯ ಸರ್ಜಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಕೇಂದ್ರಿಯ ಸಮಿತಿ ಡಾ. ಧನಂಜಯ ಸರ್ಜಿ ಅವರ ಹೆಸರನ್ನು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಆಯ್ಕೆ ಮಾಡಿದೆ. ಮೇ 16ರಂದು ಪಕ್ಷದ ಹಿರಿಯರೊಂದಿಗೆ ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಾರಿಯು ಬಿಜೆಪಿ ಅಭ್ಯರ್ಥಿಯೆ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

1988ರಲ್ಲಿ ನೈಋತ್ಯ ಪದವೀಧರ ಕ್ಷೇತ್ರ ಸ್ಥಾಪಿಸಲಾಯಿತು. ಮೊದಲ ಚುನಾವಣೆಯಲ್ಲಿ ಡಿ.ಹೆಚ್.ಶಂಕರಮೂರ್ತಿ ಅವರು ಸ್ಪರ್ಧಿಸಿ ಗೆದ್ದಿದ್ದರು. ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಯಾಗಿದ್ದು ಆರು ಬಾರಿಯು ಬಿಜೆಪಿ ಅಭ್ಯರ್ಥಿಗಳೆ ಗೆದ್ದಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದಾರೆ. ಒಟ್ಟು 81,750 ಮತದಾರರು ನೋಂದಾಯಿಸಿಕೊಂಡಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ 30 ವಿಧಾನಸಭೆ ಕ್ಷೇತ್ರದಲ್ಲಿ 15 ಶಾಸಕರು ಬಿಜೆಪಿಯವರು. ಇನ್ನು, ಲೋಕಸಭೆ ಚುನಾವಣೆ ಸಂದರ್ಭದಲ್ಲು ಬಿಜೆಪಿ ಕಾರ್ಯಕರ್ತರು ನೋಂದಾಯಿತ ಮತದಾರರ ಜೊತೆ ಸಂಪರ್ಕದಲ್ಲಿದ್ದರು. ಈ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment