SHIVAMOGGA LIVE NEWS | 12 APRIL 2023
SAGARA / BENGALURU : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಡಾ.ರಾಜನಂದಿನಿ ಅವರು ಬಿಜೆಪಿ ಸದಸ್ಯತ್ವ (Join BJP) ಪಡೆದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಡಾ.ರಾಜನಂದಿನಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಅವರೊಂದಿಗೆ ಚರ್ಚೆ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಡಾ.ರಾಜನಂದಿನಿ ಅವರೊಂದಿಗೆ ಹೊನಗೋಡು ರತ್ನಾಕರ್ ಅವರು ಇದ್ದರು.
ಟಿಕೆಟ್ ಆಕಾಂಕ್ಷಿಯಾಗಿದ್ದರು
ಡಾ.ರಾಜನಂದಿನಿ ಅವರು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲದೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಬೇಸರಗೊಂಡಿರುವ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ (Join BJP).
ಗುರುತಿಸಲಿಲ್ಲ, ಟಿಕೆಟ್ ಕೊಡಲಿಲ್ಲ
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ರಾಜನಂದಿನಿ ಅವರು, ʼಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಲಿದೆ. ನನಗೆ ಟಿಕೆಟ್ ನೀಡಲಿದೆ ಎಂದು ನಂಬಿದ್ದೆ. ಆದರೆ ನನಗೆ ಅವಕಾಶ ಸಿಗಲಿಲ್ಲ. ಬಿಜೆಪಿಯವರು ತನ್ನನ್ನು ಉತ್ತಮವಾಗಿ ಸ್ವಾಗತಿಸಿದ್ದಾರೆ. ಪಕ್ಷ ಎಲ್ಲಿಯೇ ಕೆಲಸ ಮಾಡುವಂತೆ ಸೂಚಿಸಿದರೂ ಮಾಡುತ್ತೇನೆʼ ಎಂದರು.
ಇದನ್ನೂ ಓದಿ – ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ರಸ್ತೆ ತಡೆ, ಟೈರ್ಗೆ ಬೆಂಕಿ ಹಚ್ಚಲು ಯತ್ನ, ವಿವಿಧ ಜವಾಬ್ದಾರಿಗೆ ರಾಜೀನಾಮೆ
ʼಸೂಕ್ತ ಸ್ಥಾನಮಾನ ನೀಡಲಾಗುತ್ತದೆʼ
ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಪರೂಪದ ರಾಜಕಾರಣಿ, ಸಮಾಜವಾದಿ ಹಿನ್ನಲೆಯ ಕಾಗೋಡು ತಿಮ್ಮಪ್ಪ ಅವರ ಮಗಳು ಡಾ.ರಾಜನಂದಿನಿ ಇವತ್ತು ಕಾಂಗ್ರೆಸ್ ಪಕ್ಷದ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಹಿಂದುಳಿದ ವರ್ಗದ ಡಾ.ರಾಜನಂದಿನಿ ವೃತ್ತಿಯಲ್ಲಿ ವೈದ್ಯರು. ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಇವರು ಬಿಜೆಪಿ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಸಾಕಷ್ಟು ಬಲ ಬಂದಿದೆ. ಸೊರಬ, ಸಾಗರ ಸೇರಿ ಶಿವಮೊಗ್ಗ ಜಿಲ್ಲೆಯಲ್ಲಿ ಇವರ ಸೇರ್ಪಡೆಯಿಂದ ಎಲ್ಲರೂ ಗೆಲ್ಲಲು ದೊಡ್ಡ ಶಕ್ತಿ ತುಂಬಿದಂತಾಗಿದೆ. ನಮ್ಮ ಸರ್ಕಾರ ಬಂದಾಗ ಅವರಿಗೂ ಸೂಕ್ತ ಸ್ಥಾನಮಾನ ಕೊಡಲು ತೀರ್ಮಾನಿಸಲಾಗಿದೆ.
LATEST NEWS
- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

About The Editor
ನಿತಿನ್ ಆರ್.ಕೈದೊಟ್ಲು





