‘ಡಾ. ಧನಂಜಯ ಸರ್ಜಿ ಈ ರೀತಿ ಮಾಡುತ್ತಾರೆ ಅಂದುಕೊಂಡಿರಲಿಲ್ಲ’, ಈ‍ಶ್ವರಪ್ಪ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 MAY 2024

SHIMOGA : ಮೇಲ್ಮನೆಗೆ ಆಯ್ಕೆಯಾಗುವವರು ತಮ್ಮ ಚಿಂತನೆಗಳ ಮೂಲಕ ಮತದಾರರನ್ನು (Voters) ಸೆಳೆಯಬೇಕಿತ್ತು. ಆದರೆ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತದಾರರನ್ನು ದುಶ್ಚಟಗಳ ದಾಸರನ್ನಾಗಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿನ ಬಿಜೆಪಿ ಪಾರ್ಟಿ, ಡಾ.ಸರ್ಜಿಯ ಗುಂಡು ಪಾರ್ಟಿ ಆಗಿದೆ. ಬಿಜೆಪಿ ಕಾರ್ಯಕರ್ತನಾದಾಗಿನಿಂದ ಈವರೆಗೆ ಹಲವು ಚುನಾವಣೆ ಎದುರಿಸಿ, ಗೆಲುವು ಸಾಧಿಸಿದ್ದೇವೆ. ಆದರೆ ದುರಾಭ್ಯಾಸಕ್ಕೆ ಮತದಾರರನ್ನು ತಳ್ಳಲಿಲ್ಲ. ಪಾರ್ಟಿ ಕೊಡಿಸಲಿಲ್ಲ. ಡಾ. ಸರ್ಜಿ ಸುಸಂಸ್ಕೃತ ಮನೆತನದಿಂದ ಬಂದವರು. ಅವರು ಇಂತಹ ಕೆಲಸ ಮಾಡಬಾರದಿತ್ತು ಎಂದರು.

ಹರ್ಷನ ಕೊಲೆಯಾದಾಗ ಪ್ರಗತಿಪರರ ಜತೆ ಡಾ.ಸರ್ಜಿ ಸೇರಿಕೊಂಡರು. ಆಗ ಅವರಿಗೆ ಹಿಂದುತ್ವ ನೆನಪಿಗೆ ಬರಲಿಲ್ಲವೆ. ಈಗ ಹಿಂದುತ್ವದ ಪರ ಮಾತನಾಡುತ್ತಿದ್ದಾರೆ. ಈವರೆಗೆ ಪದವೀಧರರು ಹಿಂದುತ್ವವನ್ನು ಎಂದೂ ಕೈಬಿಟ್ಟಿಲ್ಲ. ಈ ಬಾರಿಯೂ ಅವರು ಹಿಂದುತ್ವದ ಪರ ಇರುವ ರಘುಪತಿ ಭಟ್ ಅವರ ಕೈ ಹಿಡಿಯಲಿದ್ದಾರೆ ಎಂದರು.

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಮಾತನಾಡಿ, ಉಡುಪಿ ಮಾತ್ರವಲ್ಲದೆ ಕ್ಷೇತ್ರದ ಇತರೆ ಜಿಲ್ಲೆಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಂದುತ್ವಕ್ಕೆ ಕೈ ಜೋಡಿಸುವ ಎಲ್ಲರೂ ಜತೆಗೆ ರಾಷ್ಟ್ರಭಕ್ತರ ಬಳಗ ಸಹ ಬೆಂಬಲ ನೀಡಿದೆ. ಈ ಚುನಾವಣೆ ಮೂಲಕ ಬಲಿಷ್ಠರನ್ನು ಎದುರಿಸುವ ಅವಕಾಶ ಸಿಕ್ಕಿದೆ ಎಂದರು. ಈಶ್ವರಪ್ಪ ಅವರ ಮುಂದಿನ ಎಲ್ಲ ನಡೆಗಳಲ್ಲೂ ನಾನು ಜೊತೆಯಾಗಿರುತ್ತೇನೆ. ಚುನಾವಣೆಯಲ್ಲಿ ಸೋತರೆ ಅದು ನನ್ನ ವೈಯಕ್ತಿಕ ಸೋಲು. ಗೆದ್ದರೆ ಅದು ಹಿಂದುತ್ವದ ಗೆಲುವು ಎಂದರು.

ಲಕ್ಷ್ಮೀ ಶಂಕರ್ ನಾಯಕ್, ಎಂ. ಶಂಕರ್, ವಾಗೀಶ್ ಸೇರಿ ಹಲವರು ಇದ್ದರು.

ಆದಿಚುಂಚನಗಿರಿಗೆ ರಘಪತಿ ಭಟ್‌

adichunchanagiri

ಶಿವಮೊಗ್ಗದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ ಭೇಟಿ ನೀಡಿದ್ದರು. ಪದವೀಧರರಲ್ಲಿ ಮತಯಾಚನೆ ಮಾಡಿದರು. ಎಂ.ಶಂಕರ್, ಅಮಪ್ರಕಾಶ್, ಸುವರ್ಣ ಶಂಕರ್, ಲಕ್ಷ್ಮೀಕಾಂತ್, ಸುಬ್ಬಣ್ಣ ಉಪಸ್ಥಿತರಿದ್ದರು. ಶಿವಮೊಗ್ಗ ನಗರ ಮತ್ತು ಭದ್ರಾವತಿಯ ವಿವಿಧೆಡೆ ರಘುಪತಿ ಭಟ್‌ ಪ್ರಚಾರ ಮಾಡಿದರು.

ಇದನ್ನೂ ಓದಿ – ಸ್ಮಾರ್ಟ್‌ ಹೆಲ್ಮೆಟ್‌ ಸಿದ್ಧಪಡಿಸಿದ ಶಿವಮೊಗ್ಗದ ವಿದ್ಯಾರ್ಥಿಗಳು, ಹೇಗೆ ಕೆಲಸ ಮಾಡುತ್ತೆ? ಪ್ರಯೋಜನವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 30, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment