ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು : ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದಿರುವ ಭ್ರಷ್ಟಾಚಾರ (Corruption) ಮತ್ತು ಅಸಮರ್ಪಕ ಆಡಳಿತದ ಕುರಿತು ಸರ್ಕಾರ, ಉನ್ನತ ಮಟ್ಟದ ತನಿಖೆ ನಡೆಸಿ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ಡಾ.ಧನಂಜಯ ಸರ್ಜಿ ಆಗ್ರಹಿಸಿದರು. 

ವಿಧಾನಪರಿಷತ್‌ ಕಲಾಪದಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಾ. ಧನಂಜಯ ಸರ್ಜಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಾದ ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಏಕರೂಪದ ವೇಳಾಪಟ್ಟಿ ಅನುಸರಿಸುವಲ್ಲಿ ಲೋಪ, ವಿ.ವಿ.ಯ ಪ್ರಸಾರಾಂಗದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅವ್ಯವಹಾರ (Corruption) ಆಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ವಿಶ್ವವಿದ್ಯಾಲಯದ ದೂರ ಶಿಕ್ಷಣ ಪ್ರವೇಶಾತಿ ಮತ್ತು ವ್ಯಾಸಂಗದ ಇನ್ನಿತರ ನಿರ್ವಹಣೆಗಳನ್ನು ಎಲ್.ಎಂ.ಎಸ್ ಮುಖಾಂತರ ನಡೆಸಲು ಬೆಂಗಳೂರಿನ ಸಾಫ್ಟ್‌ವೇರ್‌ ಕಂಪೆನಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದ, ದರ ನಿರ್ಣಯಗಳಲ್ಲಿನ ತಪ್ಪುಗಳಿಂದಾಗಿ ವಿಶ್ವವಿದ್ಯಾಲಯಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

– ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್‌ ಸದಸ್ಯ

Dr-Dhananjaya-Sarji-in-session.

ಈ ಸಾಫ್ಟ್‌ವೇರ್‌ ಸಂಸ್ಥೆ ಈ ಹಿಂದೆ ಅಧ್ಯಯನ ಕೇಂದ್ರ ತೆರೆದು ವಿದ್ಯಾರ್ಥಿಗಳಿಂದ ಪಡೆಯಲಾಗಿದ್ದ ಶುಲ್ಕವನ್ನು ವಿವಿಗೆ ಪಾವತಿಸದೆ ಕೋಟ್ಯಂತರ ರೂಪಾಯಿ ಬಾಕಿ ಉಳಿಸಿಕೊಂಡಿದೆ. ವಿವಿಗೆ ನೀಡಿದ್ದ 30 ಲಕ್ಷ ರೂ. ಮೊತ್ತದ ಚೆಕ್ ಬೌನ್ಸ್ ಆಗಿ ಪ್ರಕರಣ ನ್ಯಾಯಾಲಯದಲ್ಲಿದೆ. ಮತ್ತೊಮ್ಮೆ ಅದೇ ಸಂಸ್ಥೆಯೊಂದಿಗೆ ವ್ಯವಹರಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರಲ್ಲಿ ಭ್ರಷ್ಟಾಚಾರ ಆಗಿರುವುದು ಕಂಡುಬರುತ್ತಿದೆ. ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಜಫ್ತಿ, ನ್ಯಾಯಾಲಯದ ಆವರಣಕ್ಕೆ ರವಾನೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2025

Leave a Comment