Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿದ್ದರಾಮಯ್ಯ ಅವರ ಕ್ರಾಸ್‌ಬೀಡ್‌ ಹೇಳಿಕೆಗೆ ಈಶ್ವರಪ್ಪ ತಿರುಗೇಟು, ಸಚಿವರು ಹೇಳಿದ್ದೇನು?

ಸಿದ್ದರಾಮಯ್ಯ ಅವರ ಕ್ರಾಸ್‌ಬೀಡ್‌ ಹೇಳಿಕೆಗೆ ಈಶ್ವರಪ್ಪ ತಿರುಗೇಟು, ಸಚಿವರು ಹೇಳಿದ್ದೇನು?

02/12/2020 7:29 PM
ನಿತಿನ್‌ ಕೈದೊಟ್ಲು

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಲವ್ ಜಿಹಾದ್, ಗೋ ಹತ್ಯೆ ನಿಷೇಧ, ಕುರುಬರ ಎಸ್ಟಿ ಹೋರಾಟಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಲವ್ ಜಿಹಾದ್‍ ಸಂಬಂಧ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಅದರಲ್ಲು ಕ್ರಾಸ್ಬೀಡ್ ಎಂಬರ್ಥದ ಅವರ ಮಾತು ಅಯೋಗ್ಯತನದ್ದು. ಇಂದಿರಾಗಾಂಧಿ ಮುಸ್ಲಿಂ ಒಬ್ಬರನ್ನು, ಸೋನಿಯಾ ಮತ್ತೊಂದು ಜಾತಿಯೋರ್ವನನ್ನು, ಪ್ರಿಯಾಂಕ ಕ್ರಿಶ್ಚಿಯನ್ನರನ್ನು ಮದುವೆಯಾಗಿದ್ದಾರೆ. ಹಾಗಾದರೆ ಇವರೆಲ್ಲರೂ ಕ್ರಾಸ್‍ ಬೀಡ್‍ಗಳಾ ಎಂದು ಕುಟುಕಿದರು.

ಮದುವೆಯಾಗಿ ಅರ್ಧಕ್ಕೆ ಕೈಬಿಡುವ ಘಟನೆ

ಮುಸ್ಲಿಂ ಯುವಕರು ಹಿಂದು ಯುವತಿಯರನ್ನು ವಂಚಿಸಿ ಮದುವೆಯಾಗಿ ಅರ್ಧಕ್ಕೆ ಕೈಬಿಡುವ ಘಟನೆಗಳು ಬೇಕಾದಷ್ಟಿವೆ. ಇಂತಹ ಹೆಣ್ಣು ಮಕ್ಕಳ ಕಣ್ಣೀರನ್ನು ನೋಡಿದರೆ ಕರುಳು ಕಿತ್ತು ಬರುತ್ತದೆ. ಶಿವಮೊಗ್ಗದಲ್ಲಿಯೂ ಸಹ ಈ ರೀತಿಯ ಘಟನೆಗಳು ನನಗೆ ತಿಳಿದುಬಂದಿವೆ. ಸಿದ್ದರಾಮಯ್ಯ ಅವರಿಗೆ ಹಿಂದೂ ಹೆಣ್ಣುಮಕ್ಕಳ ಬಗ್ಗೆಯೇ ಗೊತ್ತಿಲ್ಲ. ಹಾಗಾಗಿ ಮಾತನಾಡಿದ್ದಾರೆ. ಕ್ರಾಸ್‍ ಬ್ರೀಡ್ ಎಂಬ ಪದ ಉಪಯೋಗಿಸಿದ ಅವರಿಗೆ ನಾಚಿಕೆಯಾಗಬೇಕು ಎಂದರು.

ಹಿಂದೂ ಹೆಣ್ಣುಮಕ್ಕಳ ಸುರಕ್ಷತೆಗೆ ಕಾನೂನು

ಹೆಣ್ಣು ಭೋಗದ ವಸ್ತುವಲ್ಲ. ಎಷ್ಟೋ ಮುಸ್ಲಿಂ ಯುವಕರು ಹಿಂದು ಹೆಣ್ಣುಮಕ್ಕಳನ್ನು ಗರ್ಭಿಣಿಯನ್ನಾಗಿ ಮಾಡಿದ್ದಾರೆ. ಅಂತಹ ಹೆಣ್ಣುಮಕ್ಕಳು ಗಂಡನ ಮನೆಗೂ ಹೋಗದೇ, ತವರು ಮನೆಗೂ ಹೋಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಹಿಂದು ಹೆಣ್ಣುಮಕ್ಕಳ ಸುರಕ್ಷತೆಗಾಗಿ ಲವ್ ಜಿಹಾದ್ ಕಾನೂನನ್ನು ಜಾರಿಗೆ ತಂದೇ ತರುತ್ತೇವೆ. ಹಿಂದೂ ಸಮಾಜ ಗಟ್ಟಿಯಾಗಿರುವುದರಿಂದ ಲವ್ ಜಿಹಾದ್ ಪ್ರಕರಣಗಳು ಕಡಿಮೆಯಾಗಿವೆ ಎಂದರು.

ತಾಯಿಗೆ ವಯಸ್ಸಾಗಿದೆ, ಬೀದಿಗೆ ಬಿಡ್ತಾರಾ?

ಸಿದ್ದರಾಮಯ್ಯ ಗೋಹತ್ಯೆ ವಿಚಾರದಲ್ಲಿ ಮಾತನಾಡಿದ್ದಾರೆ. ಗೋವು ಹಿಂದು ಸಂಸ್ಕೃತಿಯ ಪ್ರತೀಕವಾಗಿದೆ. ಮುದಿ ದನಗಳನ್ನು ಬಿಜೆಪಿ, ಆರ್‍ಎಸ್‍ಎಸ್ ಅವರ ಮನೆ ಬಾಗಿಲಿಗೆ ಬಿಡಬೇಕು ಎಂಬ ಅವರ ಹೇಳಿಕೆ ಎಷ್ಟೊಂದು ಅಸಂಬದ್ದವಾಗಿದೆ. ಅವರ ತಾಯಿಗೂ ವಯಸ್ಸಾಗಿದೆ. ಅವರನ್ನು ಹೀಗೆ ಬೀದಿಗೆ ಬಿಡುತ್ತಾರಾ ಎಂದು ಪ್ರಶ್ನಿಸಿದ ಈಶ್ವರಪ್ಪ, ಗೋಹತ್ಯೆ ತಡೆಯಲು ಹೋದ ಅನೇಕ ಹಿಂದು ಯುವಕರನ್ನು ಮಂಗಳೂರಿನಲ್ಲಿ ಕೊಲೆ ಮಾಡಲಾಗಿದೆ. ಇದು ಮುಸಲ್ಮಾನರ ಓಲೈಕೆಯೇ ಎಂದ ಅವರು, ಗೋಹತ್ಯೆ ನಿಷೇಧ ಕಾನೂನು ಕೂಡ ಜಾರಿಗೆ ತಂದೇ ತರುತ್ತೇವೆ. ಇದರಿಂದ ಹಿಂದು ಸಮಾಜ ಮತ್ತಷ್ಟು ಜಾಗೃತವಾಗುತ್ತದೆ ಎಂದರು.

ನಾನು ಕುರುಬ ನಾಯಕನಲ್ಲ

ಕುರುಬರ ಎಸ್‍ಟಿ ಹೋರಾಟದ ಹಿಂದೆ ಆರ್‍ಎಸ್‍ಎಸ್‍ ಕೈವಾಡವಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ ಈಶ್ವರಪ್ಪ, ನಾನು ಕುರುಬ ನಾಯಕನಲ್ಲ. ಹಿಂದುತ್ವದ ಪ್ರತಿಪಾದಕ. ಇದು ಅವರಿಗೆ ನೆನಪಿರಲಿ. ಕುರುಬ ಸಮಾಜವನ್ನು ಎಸ್‍ಟಿಗೆ ಸೇರಿಸಬೇಕೆಂಬ ಹೋರಾಟದಲ್ಲಿ ಜನಾಂಗದ ಎಲ್ಲರು ಇದ್ದಾರೆ. ಇದನ್ನು ಮರೆತು ಸಿದ್ದರಾಮಯ್ಯ ಇದರಲ್ಲಿ ಆರ್‍ಎಸ್‍ಎಸ್‍ ಅನ್ನು ಎಳೆತಂದಿದ್ದಾರೆ. ಇದು ಖಂಡನೀಯ. ಜಾತಿ ರಾಜಕಾರಣವನ್ನು ನಾನೆಂದೂ ಮಾಡುವುದಿಲ್ಲ. ಇದು ಅವರಿಗೆ ನೆನಪಿರಲಿ ಎಂದರು.

ಕಾಂಗ್ರೆಸ್‍ನಲ್ಲಿ ಇರಲು ಅಯೋಗ್ಯರು

ಸಿದ್ದರಾಮಯ್ಯ ಅವರು ಕಾಂಗ್ರೆಸ್ನಲ್ಲಿ ಇರಲು ಅಯೋಗ್ಯರು. ಅವರು ಕೂಡಲೇ ಹಿಂದು ಸಮಾಜದ ಕ್ಷಮೆ ಕೇಳಬೇಕು ತಮ್ಮ ಹೇಳಿಕೆಗಳನ್ನು ವಾಪಾಸ್ ತೆಗೆದುಕೊಳ್ಳಬೇಕು. ಇನ್ನಾದರೂ ಮೂರ್ಖತನದ ಮಾತುಗಳನ್ನು ಬಿಡಬೇಕು ಎಂದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 110720 BY Raghavendra press meet 1 ತಾಳಗುಪ್ಪ ಬದಲು ಕೋಟೆಗಂಗೂರಿಗೆ ರೈಲ್ವೆ ಟರ್ಮಿನಲ್ ಸ್ಥಳಾಂತರ, ಸಂಸದ ರಾಘವೇಂದ್ರ ಹೇಳಿದ್ದೇನು?
Next Article 031220 BV Shrinivas Nominated As Youth Congress National President 1 ಭದ್ರಾವತಿ ಯುವಕ ಈಗ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ

ಇದನ್ನೂ ಓದಿ

Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
KS-Eshwarappa-Press-meet-in-Shimoga
SHIVAMOGGA CITY

‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Shimoga-Mahanagara-Palike-ambedkar-statue
SHIVAMOGGA CITY

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Crime-News-General-Image
CRIME DIARYSHIVAMOGGA CITY

ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?