ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್

Published On : ಜುಲೈ 19, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್‍

ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ ಸುಳ್ಳು. ಇದನ್ನು ಅವರು ಒಪ್ಪಿಕೊಂಡಿದ್ದಾರೆ. ಅದನ್ನು ಯಾರೋ ಹುಚ್ಚನೊಬ್ಬ ವೈರಲ್ ಮಾಡಿದ್ದಾನೆ. ಈ ಈ ಬಗ್ಗೆ ತನಿಖೆಯಾಗಲಿ.

ದೇಶದ ಅಭಿವೃದ್ಧಿ, ಹಿಂದೂ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮುಂದೆಯು ನನ್ನ ಗಮನ ಅದರ ಕಡೆಗೆ ಇರಲಿದೆ.

218261306 1155895278223714 4200932920845863004 n.jpg? nc cat=100&ccb=1 3& nc sid=730e14& nc ohc=Gkc57rZpnGIAX 1XYuJ&tn=XgSJ3kUX1No5RJvs& nc ht=scontent.fblr1 6

ಸಂಘಟನೆ ಮತ್ತು ಹಿರಿಯರು ಯಾವ ಜವಾಬ್ದಾರಿ ನೀಡುತ್ತಾರೋ ಅದನ್ನು ನಿರ್ವಹಿಸಿಕೊಂಡು ಬಂದಿದ್ದೇನೆ. ಮುಂದೆಯು ಅದನ್ನೆ ನಿರ್ವಹಿಸುತ್ತೇನೆ. ಸಚಿವ ಸ್ಥಾನ ತೊರೆಯಿರಿ ಎಂದು ಸಂಘಟನೆ ಸೂಚಿಸಿದರೆ ನಾನು ಆ ಕೆಲಸ ಮಾಡುತ್ತೇನೆ. ಆದರೆ ನಾನಾಗಿ ರಾಜೀನಾಮೆ ನೀಡುವುದಿಲ್ಲ.

ಯುವಕರಿಗೆ ಆದ್ಯತೆ ನೀಡಬೇಕು ಎಂದು ಪಕ್ಷ ಯೋಚಿಸಿದೆ. ನನಗೆ 72 ವರ್ಷ ವಯಸಾಗಿದೆ. ಯುವಕರಿಗೆ ಅವಕಾಶ ಸಿಗಲಿದೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿಯೆ ಅಧಿಕಾರಕ್ಕೆ ಬರಲಿದೆ. ದೇಶದ ಆಡಳಿತ ನಡೆಸಲಿದೆ.

ಸಚಿವ ಈಶ್ವರಪ್ಪ ಅವರ ಸುದ್ದಿಗೋಷ್ಠಿಯ ವಿಡಿಯೋ ರಿಪೋರ್ಟ್

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜುಲೈ 19, 2021

Leave a Comment