SHIVAMOGGA LIVE NEWS | 7 MAY 2024
ELECTION NEWS : ಲೋಕಸಭೆ ಚುನಾವಣೆಯಲ್ಲಿ ತಾವು ಗೆಲ್ಲಬಹುದು ಎಂಬ ಕಾರಣಕ್ಕೆ ತಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ಈ ಹಿಂದೆ ರಾಘವೇಂದ್ರ ಪರ ಪ್ರಚಾರ ಮಾಡಿದ್ದ ವಿಡಿಯೋವನ್ನು ಈಗ ವೈರಲ್ ಮಾಡಲಾಗುತ್ತಿದೆ. ತಮಗೆ ಜನ ಬೆಂಬಲ ವ್ಯಕ್ತವಾಗುತ್ತಿದ್ದಂತೆಯೇ ಈ ರೀತಿ ಅಪ ಪ್ರಚಾರ ನಡೆಸಲಾಗುತ್ತಿದೆ. ಇದು ನೀಚತನದ ರಾಜಕೀಯ ಷಡ್ಯಂತ್ರ. ಆದರೆ ತಾವು ಯಾವುದೇ ಕಾರಣಕ್ಕೂ ಚುನಾವಣ ಕಣದಿಂದ ಹಿಂದಕ್ಕೆ ಸರಿದಿಲ್ಲ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು, ಎಲ್ಲ ವರ್ಗದ ಜನರು ತಮ್ಮೊಂದಿಗೆ ಇದ್ದಾರೆ. ಆದ್ದರಿಂದ ಈ ಬಾರಿ ತಾನು ಗೆಲ್ಲುತ್ತೇನೆ ಎಂಬ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು, ಈಶ್ವರಪ್ಪ, ಪತ್ನಿ ಜಯಲಕ್ಷ್ಮಿ, ಪುತ್ರ ಕೆ.ಈ.ಕಾಂತೇಶ್ ಸೇರಿದಂತೆ ಕುಟುಂಬದ ಸದಸ್ಯರ ಜೊತೆಗೆ ತೆರಳಿ ಮತದಾನ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೋಟ್ ಹಾಕಿದರೆ ಸಿಗುತ್ತೆ ಸಿಂಹಾಸನ, ಕಿರೀಟ, ರಾಜ ಪೋಷಾಕಿನಲ್ಲಿ ಕಂಗೊಳಿಸ್ತಿದ್ದಾರೆ ಸಿಬ್ಬಂದಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200