SHIVAMOGGA LIVE NEWS | 19 APRIL 2024
ELECTION NEWS : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮತ್ತು ಪತಿ ಶಿವರಾಜ್ ಕುಮಾರ್ ಅವರು ಹಿಂದೂ ಸಮಾಜದ ಕ್ಷಮೆಯಾಚಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.
ಈಶ್ವರಪ್ಪ ಏನೇನು ಹೇಳಿದರು?
ಅದೇ ದೊಡ್ಡ ಶೋ ಅಂದುಕೊಂಡಿದ್ದಾರೆ
ನಿನ್ನೆ ರೋಡ್ ಶೋನಲ್ಲಿ ಮೂವರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಇದನ್ನೆ ದೊಡ್ಡ ಶೋ ಅಂದುಕೊಂಡಿದ್ದಾರೆ. ನನ್ನ ನಾಮಪತ್ರ ಸಲ್ಲಿಕೆ ವೇಳೆ 35 ಸಾವಿರ ಜನರು ಸ್ವಯಂ ಪ್ರೇರಿತವಾಗಿ ಭಾಗವಹಿಸಿದ್ದರು. ಜಿಲ್ಲೆಯ ಶೇ.60ರಷ್ಟು ಜನರು ನನ್ನೊಂದಿಗಿದ್ದಾರೆ. ಹೈಕಮಾಂಡ್ ಯಡಿಯೂರಪ್ಪ ಅವರನ್ನು ನಂಬಿಕೊಂಡಿದೆ. ಆದರೆ ಈಗ ಅವರು ಬದಲಾಗಿದ್ದಾರೆ. ಮಹಿಳೆಯರ ಶಾಪದಿಂದ ಯಡಿಯೂರಪ್ಪ ದಾರಿ ತಪ್ಪಿದ್ದಾರೆ. ಹಾಗಾಗಿ ರಾಘವೇಂದ್ರ ಸೋಲುತ್ತಾರೆ ಎಂದು ಈಶ್ವರಪ್ಪ ಹೇಳಿದರು.
ಗೀತಾ, ಶಿವರಾಜ್ ಕುಮಾರ್ ಕ್ಷಮೆ ಕೇಳಬೇಕು
ಡಾ. ರಾಜ್ ಕುಮಾರ್ ಅವರು ರಾಘವೇಂದ್ರ ಸ್ವಾಮಿ ಕುರಿತು ಹೇಳಿರುವ ಹಾಡುಗಳು ಅವರ ಭಕ್ತಿಯನ್ನು, ಹಿಂದೂ ಸಮಾಜದ ಮೇಲಿರುವ ಗೌರವ ತೋರಿಸುತ್ತದೆ. ಈಚೆಗೆ ಜಟ್ಪಟ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರು ಹಣೆಗೆ ಹಚ್ಚಿದ್ದ ಕುಂಕುಮ ಅಳಿಸಿದ್ದಾರಂತೆ. ಆದ್ದರಿಂದ ಅವರಿಬ್ಬರು ಹಿಂದೂ ಸಮಾಜದ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಸಾಧು, ಸಂತರಿಗೆ ಬೆದರಿಕೆ
ಕ್ಷೇತ್ರ ವ್ಯಾಪ್ತಿಯ ಸಾಧು, ಸಂತರನ್ನು ಭೇಟಿಯಾಗುತ್ತಿದ್ದೇನೆ. ಅವರೆಲ್ಲ ತನಗೆ ಆಶೀರ್ವಾದ ಮಾಡತ್ತಿದ್ದಾರೆ. ಇನ್ನು, ಲಿಂಗಾಯತ ಸಮುದಾಯದ ಅನೇಕ ಮಹಿಳೆಯರು ತನ್ನ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಸಾಧು, ಸಂತರಿಗೆ ಬೆದರಿಕೆ ಮುಂದುವರೆದಿದೆ. ಆದರೆ ಸಾಧು, ಸಂತರು ತನಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಲ್ಲದೆ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಆಶೀರ್ವದಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ – ಇವತ್ತೇ ಕೊನೆ, ಶಿವಮೊಗ್ಗದಲ್ಲಿ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ? ಹಿಂಪಡೆಯಲು ಎಷ್ಟು ದಿನ ಅವಕಾಶ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200