| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 5 ಆಗಸ್ಟ್ 2019
ನಮ್ಮ ಪಕ್ಷಕ್ಕೆ 18 ಅಳಿಯಂದಿರು ಬೇರೆ ಬಂದಿದ್ದಾರೆ. ಅವರನ್ನು ತೃಪ್ತಿಪಡಿಸಬೇಕಿದೆ. ನಮ್ಮನ್ನು ನಂಬಿ ಬಂದವರನ್ನು ಅರ್ಧಕ್ಕೆ ಕೈ ಬಿಡಬಾರದಲ್ಲ. ಸಂಪುಟ ರಚನೆ ಕುರಿತು ಪತ್ರಕರ್ತರ ಪ್ರಶ್ನೆಗೆ ಶಾಸಕ ಕೆ.ಎಸ್.ಈಶ್ವರಪ್ಪ ನೀಡಿದ ಉತ್ತರ ಇದು.

ಗೋವಿಂದಾಪುರದಲ್ಲಿ ಆಶ್ರಯ ಮನೆಗಳ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನೊಂದು ವಾರದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ. 18 ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರಿಗೆ ಆದ್ಯತೆ ನೀಡಬೇಕಿದೆ. ಸಮ್ಮಿಶ್ರ ಸರ್ಕಾರ ಸರಿಯಾಗಿ ನಡೆಯುತ್ತಿಲ್ಲ ಎಂದು ಅಲ್ಲಿಂದ ಹೊರಗೆ ಬಂದಿದ್ದಾರೆ. ಅವರನ್ನು ಮೊದಲು ತೃಪ್ತಿಪಡಿಸಬೇಕಿದೆ ಎಂದರು.
ಒಬ್ಬರೇ ಸಿಎಂ ನೋಡಿ ಹೇಗೆಲ್ಲ ಕೆಲ ಮಾಡ್ತಾರೆ
ಇನ್ನು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಈಶ್ವರಪ್ಪ, ಈ ಹಿಂದೆ ಸರ್ಕಾರವೇ ಇರಲಿಲ್ಲ. ಈಗ ಒಬ್ಬರೆ ಮುಖ್ಯಮಂತ್ರಿ ಹೇಗೆ ಕೆಲಸ ಮಾಡುತ್ತಿದ್ದಾರೆ. ಅತಿವೃಷ್ಟಿಯಾದ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಆ ಜನರಲ್ಲಿ ಭರವಸೆ ಮೂಡಿಸಿದ್ದಾರೆ. ರಾಜ್ಯದ ಕೆಲವು ಭಾಗದಲ್ಲಿ ಬರವಿದೆ. ಇನ್ನು ಕೆಲವು ಭಾಗದಲ್ಲಿ ಅತಿವೃಷ್ಟಿಯಾಗಿದೆ. ಇವತ್ತು ದೆಹಲಿಗೆ ತೆರಳುತ್ತಿರುವ ಸಿಎಂ ಯಡಿಯೂರಪ್ಪ ಅವರು ರಾಜ್ಯಕ್ಕೆ ಕೇಂದ್ರದಿಂದ ನೆರವು ತರಲಿದ್ದಾರೆ ಎಂದರು.
ಮೇಯರ್ ಲತಾ ಗಣೇಶ್, ಉಪ ಮೇಯರ ಚನ್ನಬಸಪ್ಪ, ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()