‘ನಾನು ಈ ಬಗ್ಗೆ ಒಂದು ಪರ್ಸೆಂಟ್ ಕೂಡ ಯೋಚನೆ ಮಾಡಿಲ್ಲ, ನನ್ನ ಅಭಿಪ್ರಾಯ ಸ್ಪಷ್ಟ’, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019

71053142 930302700664484 3871352906363961344 n.jpg? nc cat=109& nc oc=AQm43a lj8UotMIYvWYSDacXZlLoHNpQE1yctTqm6HxxFQyffmYpSuh Du5D1ZsHTXs& nc ht=scontent.fblr1 3

ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಸ್ಪರ್ಧಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಇದನ್ನು ಸಚಿವ ಕೆ.ಎಸ್.ಈಶ್ವರಪ್ಪ ತಿರಸ್ಕರಿಸಿದ್ದಾರೆ.

Prashanth GPS copy

ಪುತ್ರ ಕಾಂತೇಶ್ ಅವರನ್ನು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಣಕಿಳಿಸಲಾಗುತ್ತಿದೆ ಎಂದು ಸುದ್ದಿ ಹಾರಿದಾಡುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಮೊಗ್ಗದಲ್ಲಿ ಉತ್ತರ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕಾಂತೇಶ್ ಅವರನ್ನು ಅಭ್ಯರ್ಥಿಯಾಗಿಸುವ ಕುರಿತು ಶೇ.1ರಷ್ಟು ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲಕ್ಕು ಉತ್ತರ ಕೊಡಲು ಆಗುವುದಿಲ್ಲ

ಕಾಂತೇಶ್ ಅವರನ್ನು ರಾಣೆಬೆನ್ನೂರಿನಲ್ಲಿ ನಿಲ್ಲಿಸುವ ಯೋಚನೆ ನನ್ನಲ್ಲಿಲ್ಲ. ಯಾರೋ ಫೇಸ್’ಬುಕ್ ಪೇಜ್ ಮಾಡಿದ್ದಾರೆ. ಅದರಲ್ಲಿ ಏನೇನೊ ಬರುತ್ತವೆ. ಅದಕ್ಕೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಕಾರ್ಯಕರ್ತರು, ಜನರ ಅಭಿಪ್ರಾಯಗಳಿರುತ್ತವೆ. ಆದರೆ ಶೇ.1ರಷ್ಟು ಇಂತಹ ಯೋಚನೆ ಮಾಡಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment