SHIVAMOGGA LIVE NEWS | 3 JANUARY 2023
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲ ತಮಗಿಲ್ಲ. ಆದರೆ ಅವರನ್ನು ಸೋಲಿಸುವ ವಿಚಾರದಲ್ಲಿ ತಮಗೆ ಆಸಕ್ತಿ ಇದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಮಲ್ಲೇಶ್ವರ ನಗರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ (siddaramaiah) ಅವರು ಯಾವುದೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಅವರನ್ನು ಸೋಲಿಸುತ್ತೇವೆ ಎಂದರು.
ಇದನ್ನೂ ಓದಿ – ಪ್ರಸನ್ನ ಭಟ್ ಅಂತಿಮ ದರ್ಶನಕ್ಕೆ ಶಿವಮೊಗ್ಗ, ಹೊಸನಗರದಲ್ಲಿ ದೊಡ್ಡ ಸಂಖ್ಯೆಯ ಜನ, ಮುಖ್ಯ ರಸ್ತೆಯಲ್ಲಿ ಮೆರವಣಿಗೆ
ಶಾಸಕರೊಬ್ಬರು ಕ್ಷೇತ್ರ ಬದಲಿಸುವುದು ಮತದಾರರು ಮತ್ತು ಪಕ್ಷಕ್ಕೆ ಮಾಡಿದ ಅಪಮಾನವಾಗಿದೆ. ಸಿದ್ದರಾಮಯ್ಯ ಅವರು ಈಗ ಕ್ಷೇತ್ರ ಯಾವುದು ಎಂದು ಯೋಚಿಸುತ್ತಿದ್ದಾರೆ. ಮುಂದೆ ಯಾವ ಪಕ್ಷ ಎಂದು ಯೋಚಿಸುವ ಸ್ಥಿತಿಗೆ ತಲುಪಬಹುದು ಎಂದು ವ್ಯಂಗ್ಯವಾಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200