SHIVAMOGGA LIVE NEWS | 18 MARCH 2024
SHIMOGA : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಸಾಧು, ಸಂತರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಬೆಳಗ್ಗೆಯಿಂದಲೆ ಜಿಲ್ಲೆಯ ವಿವಿಧ ಮಠಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಯಾವ್ಯಾವ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ?
ಶಿವಮೊಗ್ಗದ ಬಿಳಕಿ ಮಠ, ಗೋಣಿಬೀಡು, ಹಿರೇಮಾಗಡಿ, ಮೂಡಿ, ಶಾಂತಪುರ ಮಠ, ಜಡೆ ಹಿರೇಮಠ, ಮೂಲೆಗದ್ದೆ, ಹಾರ್ನಳ್ಳಿ ಚೌಕಿಮಠ, ಹುಂಚ, ಶಿಕಾರಿಪುರದ ಸಾಲೂರು, ಶಿರಾಳಕೊಪ್ಪದ ಮಠಗಳಿಗೆ ಈಶ್ವರಪ್ಪ ಭೇಟಿ ನೀಡುತ್ತಿದ್ದಾರೆ. ಸ್ವಾಮೀಜಿಗಳನ್ನು ಭೇಟಿಯಾಗಿ, ಚುನಾವಣೆಗೆ ಸ್ಪರ್ಧಿಸುತ್ತಿದ್ದು ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತಿದ್ದಾರೆ.
ಮೋದಿ ಕಾರ್ಯಕ್ರಮಕ್ಕೆ ಗೈರು
ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದರು. ಆದರೆ ಈಶ್ವರಪ್ಪ ಅವರು ಬಿಜೆಪಿ ಅಹ್ವಾನವನ್ನು ತಿರಸ್ಕರಿಸಿದಾರೆ. ಬೆಳಗ್ಗೆಯಿಂದಲೆ ಮಠಗಳಿಗೆ ತೆರಳಿದ್ದಾರೆ. ಶನಿವಾರ ಮಂದಿರಗಳಿಗೆ ಭೇಟಿ ನೀಡಿ, ದೇವರ ಪೂಜೆ ಸಲ್ಲಿಸಿದ್ದರು.
ಇದನ್ನೂ ಓದಿ – ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200