SHIVAMOGGA LIVE NEWS | 16 APRIL 2023
SHIMOGA : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೇವಲ ಟಿಕೆಟ್ಗಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವುದು ಸರಿಯಾದ ನಿರ್ಧಾರವಲ್ಲ. ಅವರು ತಮ್ಮ ನಿರ್ಧಾರ ಪುನರ್ ಪರಿಶೀಲಿಸಬೇಕು. ಈ ಸಂಬಂಧ ಅವರಿಗೆ ಬಹಿರಂಗ ಪತ್ರ (Open Letter) ಬರೆದಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಜಗದೀಶ್ ಶೆಟ್ಟರ್ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಲಕ್ಷಾಂತರ ಕಾರ್ಯಕರ್ತರಿಗೆ ನೋವಾಗಿದೆ. ಇಷ್ಟು ವರ್ಷ ಕೊಟ್ಟ ಸಂಸ್ಕಾರದ ಫಲವೇನು ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಮನದಾಳದ ಮಾತನ್ನು ನಾನು ಬಹಿರಂಗವಾಗಿ ಹೇಳುತ್ತಿದ್ದೇನೆ ಎಂದರು.
ಕ್ಷಮೆ ಕೇಳಿ ವಾಪಸ್ ಬನ್ನಿ
ಮನಷ್ಯ ಅಂದ ಮೇಲೆ ತಪ್ಪು ಮಾಡುವುದು ಸಹಜ. ಜಗದೀಶ್ ಶೆಟ್ಟರ್ ಅವರು ಹಿರಿಯರ ಕ್ಷಮೆ ಕೇಳಿ ಪಕ್ಷಕ್ಕೆ ವಾಪಸ್ ಬರಬೇಕು ಎಂದು ಒತ್ತಾಯಿಸುತ್ತೇನೆ. ಗೋ ಹತ್ಯೆ ನಿಷೇಧ ಕಾನೂನು ತಂದಿದ್ದರು. ದೇಶ ಭಕ್ತರ ಪರವಾಗಿ ಮಾತನಾಡಿದ್ದರು. ಒಂದು ಟಿಕೆಟ್ಗಾಗಿ ಇದನ್ನೆಲ್ಲ ಮರೆತುಬಿಟ್ಟಿರಾ ಎಂದು ಈಶ್ವರಪ್ಪ ಪ್ರಶ್ನಿಸಿದರು.
ಶೆಟ್ಟರ್ಗೆ ಬಹಿರಂಗ ಪತ್ರ
ಇನ್ನು, ಇದೆ ವಿಚಾರವಾಗಿ ಜಗದೀಶ್ ಶೆಟ್ಟರ್ ಅವರಿಗೆ ಕೆ.ಎಸ್.ಈಶ್ವರಪ್ಪ ಅವರು ಬಹಿರಂಗ ಪತ್ರ (Open Letter) ಬರೆದಿದ್ದಾರೆ. ʼತಾಯಿಯಂತೆ ಕಾಪಾಡಿದ ಪಕ್ಷ ತೆಗೆದುಕೊಂಡ ನಿರ್ಣಯದ ವಿರುದ್ಧ ಅಸಮಾಧಾನಗೊಂಡಿರುವ ತಮ್ಮ ಮನಸ್ಥಿತಿ ನನಗೆ ಅರ್ಥವಾಗುತ್ತದೆ. ಆದರೆ ಪಕ್ಷ ಬಿಟ್ಟು, ನಂಬಿದ ಎಲ್ಲಾ ಆದರ್ಶಗಳನ್ನು ತೊರೆದು, ನಮ್ಮ ಪಕ್ಷದ ಚಿಂತನೆಗೆ ವಿರುದ್ಧವಾದ ಕಾಂಗ್ರೆಸ್ ಪಕ್ಷಕ್ಕೆ ತಾವು ಸೇರಲು ಬಯಸಿರುವುದು ಅತ್ಯಂತ ದುರದೃಷ್ಟಕರʼ ಎಂದು ಎರಡು ಪುಟದ ಪತ್ರದಲ್ಲಿ ಈಶ್ವರಪ್ಪ ಬರೆದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪಗೆ ಒಲಿಯಲಿದೆಯಾ ಬಿಜೆಪಿ ಟಿಕೆಟ್? ಜಾಲತಾಣಗಳಲ್ಲಿ ಶುಭಾಶಯ, ಪೋಸ್ಟರ್ ವೈರಲ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200