ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JUNE 2024
RESULT NEWS : ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ 23 ಅಭ್ಯರ್ಥಿಗಳ ಪೈಕಿ, 21 ಅಭ್ಯರ್ಥಿಗಳು ಠೇವಣಿ (Security Deposit) ಕಳೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೊರತು ಉಳಿದ್ಯಾವ ಅಭ್ಯರ್ಥಿಗಳಿಗು ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಠೇವಣಿ ಕಳೆದುಕೊಂಡ ಈಶ್ವರಪ್ಪ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ 30,050 ಮತ ಪಡೆದಿದ್ದಾರೆ. ಹಾಗಾಗಿ ಅವರು ಕೂಡ ಠೇವಣಿ ಕಳೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 12,154 ಮತ ಹೊರತು ಉಳಿದ್ಯಾವ ಕ್ಷೇತ್ರದಲ್ಲಿಯ ಈಶ್ವರಪ್ಪ ಹತ್ತು ಸಾವಿರಕ್ಕಿಂತಲೂ ಹೆಚ್ಚು ಮತ ಪಡೆಯಲು ಸಾಧ್ಯವಾಗಿಲ್ಲ.
ಠೇವಣಿ ಕಳೆದುಕೊಳ್ಳುವುದು ಅಂದರೇನು?
ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಠೇವಣಿ ಪಾವತಿಸಬೇಕು. ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ 25 ಸಾವಿರ ರೂ. ಠೇವಣಿ ಭರಿಸಬೇಕು. ಪ್ರಜಾಪ್ರತಿನಿಧಿ ಕಾಯ್ದೆ 1951ರ ಪ್ರಕಾರ ಚಲಾವಣೆಯಾದ ಒಟ್ಟು ಅರ್ಹ ಮತಗಳ ಪೈಕಿ ಆರನೇ ಒಂದು ಭಾಗಕ್ಕಿಂತಲೂ ಹೆಚ್ಚು ಮತ ಪಡೆಯಬೇಕು. ಉದಾಹರಣೆಗೆ 10 ಲಕ್ಷ ಮತ ಚಲಾವಣೆಯಾಗಿದ್ದರೆ 1.66 ಲಕ್ಷಕ್ಕಿಂತಲು ಹೆಚ್ಚು ಮತ ಪಡೆದವರು ಮಾತ್ರ ಠೇವಣಿ ಉಳಿಸಿಕೊಳ್ಳಲು ಸಾಧ್ಯ.
ಶಿವಮೊಗ್ಗದಲ್ಲಿ ಈ ಬಾರಿ ಚಲಾವಣೆಯಾಗಿದ್ದ ಒಟ್ಟು ಅರ್ಹ ಮತಗಳು 13,77,224. ಇದರಲ್ಲಿ ಆರನೇ ಒಂದು ಭಾಗ ಅಂದರೆ 2.29 ಲಕ್ಷಕ್ಕಿಂತಲು ಹೆಚ್ಚು ಮತ ಪಡೆಯಬೇಕು. 21 ಅಭ್ಯರ್ಥಿಗಳು ಇಷ್ಟು ಮತ ಪಡೆಯಲು ಸಾಧ್ಯವಾಗಲಿಲ್ಲ. ಹಾಗಾಗಿ ಠೇವಣಿ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ, ಯಾವ್ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ಎಷ್ಟು ಮತ ಗಳಿಸಿದ್ದಾರೆ?
LATEST NEWS
- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

About The Editor
ನಿತಿನ್ ಆರ್.ಕೈದೊಟ್ಲು






