ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಡಿಸೆಂಬರ್ 2021
ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಚನ್ನಬಸಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಚನ್ನಬಸಪ್ಪ, ದೇಶದಲ್ಲಿ ಮತಾಂತರ ಹೆಚ್ಚುತ್ತಿದೆ. ಆಮಿಷಗಳನ್ನೊಡ್ಡಿ ಮತಾಂತರ ಮಾಡಲಾಗುತ್ತಿದೆ. ಇಷ್ಟು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಮತಾಂತರ ತಡೆಯುವಲ್ಲಿ ವಿಫಲವಾಗಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಕಾಂಗ್ರೆಸ್ನವರಿಗೆ ಕಸಿವಿಸಿ ಏಕೆ ಎಂದು ಪ್ರಶ್ನಿಸಿದರು.
ಮತಾಂತರ ಒಂದರ್ಥದಲ್ಲಿ ರಾಷ್ಟ್ರಾಂತರವೇ ಆಗಿದೆ. ಅಂಬೇಡ್ಕರ್ ಮತಾಂತರಗೊಂಡರೂ ಅವರು ಕ್ರಿಶ್ಚಿಯನ್ ಅಥವಾ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲಿಲ್ಲ. ಹಿಂದು ಧರ್ಮದ ಭಾಗವೇ ಆಗಿದ್ದ ಬೌದ್ಧ ಧರ್ಮಕ್ಕೆ ಮತಾಂತರವಾದರು ಎಂದು ಹೇಳಿದರು.
ಶಿವಮೊಗ್ಗದ ಬಾಪೂಜಿ ನಗರ, ಶಾಂತಿನಗರ ಸೇರಿ ಹಲವು ಕಡೆ ಮತಾಂತರ ನಡೆಯುತ್ತಿದೆ. ಕ್ರಿಶ್ಚಿಯನ್ ಶಾಲೆಗಳು ಮಕ್ಕಳಿಗೆ ಕ್ರಿಶ್ಚಿಯನ್ ಧರ್ಮದ ಬಗ್ಗೆ ಸದ್ದಿಲ್ಲದೇ ಬೋಧಿಸುತ್ತಿವೆ. ಕಾಂಗ್ರೆಸ್ನವರಿಗೆ ಇದು ಅರ್ಥವಾಗುತ್ತಿಲ್ಲ. ಇದು ಹಿಂದು ದೇಶ. ಇಲ್ಲಿ ಹಿಂದುಗಳಿಗೆ ಆದ್ಯತೆ ಇರಬೇಕು. ಈ ಕಾರಣಕ್ಕಾಗಿ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದಾದರೂ ಸರಿಯೇ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತದೆ. ಜತೆಗೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ ಎಂದರು.
ಬಿಜೆಪಿ ನಗರಾಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎನ್.ಜೆ. ನಾಗರಾಜ್ ಇತರರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200