SHIVAMOGGA LIVE | 28 MAY 2023
SHIKARIPURA : ಜನರ ಆಶೀರ್ವಾದದಿಂದ 71 ಸಾವಿರ ಮತಗಳನ್ನು ಪಡೆದಿದ್ದೇನೆ. ಸೋಲು – ಗೆಲುವು ಮುಖ್ಯವಲ್ಲ. ನಾನು ಸದಾ ನಿಮ್ಮೆಲ್ಲರ ಜೊತೆಗೆ ಇರುತ್ತೇನೆ ಎಂದು ಶಿಕಾರಿಪುರ ಕ್ಷೇತ್ರದ ಪರಾಜಿತ ಪಕ್ಷೇತರ (Independent) ಅಭ್ಯರ್ಥಿ ನಾಗರಾಜ ಗೌಡ ಘೋಷಿಸಿದರು.
ಸ್ವಾಭಿಮಾನಿ ಬಳಗದ ವತಿಯಿಂದ ತರಳಬಾಳು ಭವನದಲ್ಲಿ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ನಾಗರಾಜ ಗೌಡ, ಸದಾ ಜನರೊಂದಿಗೆ ಇದ್ದು ನೋವು, ನಲಿವುಗಳಿಗೆ ಸ್ಪಂದಿಸುತ್ತೇನೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಲೋಕಸಭೆ ಚುನಾವಣೆಗಳಿವೆ. ಜನರು ನಮ್ಮ ಕೈ ಹಿಡಿಯಲಿದ್ದಾರೆ ಎಂದು ನಂಬಿದ್ದೇನೆ ಎಂದರು.
ನೂತನ ಶಾಸಕರು ಬಿಜೆಪಿಗೆ ಸೀಮಿತರಲ್ಲ. ಅವರು ಕ್ಷೇತ್ರದ ಎಲ್ಲ ಜನರಿಗೆ ಶಾಸಕರು. ಎಲ್ಲರನ್ನು ಸಮಾನವಾಗಿ ಕಾಣಬೇಕು. ಲೋಕಸಭೆ ಸದಸ್ಯರು ಕೂಡ ಎಲ್ಲಾ ಯೋಜನೆಗಳನ್ನು ಎಲ್ಲರಿಗು ತಲುಪಿಸಬೇಕು. ನಮ್ಮ ಕಾರ್ಯಕರ್ತರಿಗೆ ಸಣ್ಣ ತೊಂದರೆಯಾದರು ನಾನು ಮುಂದೆ ನಿಲ್ಲುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ – ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?
ಸ್ವಾಭಿಮಾನಿ ಬಳಗದಿಂದ ನಾಗರಾಜ ಗೌಡ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಶಿವರಾಮ್, ರಾಜಣ್ಣ, ರವಿ, ಉಮೇಶ್ ಮಾರವಳ್ಳಿ, ರಾಘವೇಂದ್ರ ನಾಯ್ಕ್, ಶಿವು ಹುಲ್ಮಾರ್, ಗಂಗಾನಾಯ್ಕ್ ಸೇರಿದಂತೆ ಹಲವರು ಇದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200