SHIVAMOGGA LIVE NEWS | 12 APRIL 2023
SAGARA : ಮಗಳು ಡಾ.ರಾಜನಂದಿನಿ ಕಾಂಗ್ರೆಸ್ ತೊರೆದು ದಿಢೀರ್ ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ (First reaction) ನೀಡಿದ್ದಾರೆ.
ರಾಜಕೀಯದಲ್ಲಿ ಬದ್ಧತೆ ಇರಬೇಕು
ಡಾ.ರಾಜನಂದಿನಿ ಅವರು ಈ ರೀತಿ ಮಾಡುತ್ತಾರೆ ಎಂದು ನಾನು ಕನಸು ಮನಸಿನಲ್ಲಿಯು ಅಂದುಕೊಂಡಿರಲಿಲ್ಲ. ರಾಜಕೀಯದಲ್ಲಿ ಸ್ಥಿರತೆ, ಬದ್ಧತೆ ಇಟ್ಟುಕೊಳ್ಳಬೇಕು. ಬದ್ಧತೆಯಿಂದಾಗಿಯೇ ನಾವು ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಕಾಗೋಡು ತಿಮ್ಮ ಪ್ಪ ತಿಳಿಸಿದರು.
ಇದನ್ನೂ ಓದಿ – ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?
ಎದೆಗೆ ಚೂರಿ ಹಾಕಿದಂತೆ
ಇಂತಹ ಸನ್ನಿವೇಶದಲ್ಲಿ ಬಿಜೆಪಿ ಸೇರ್ಪಡೆಯಾಗಿರುವುದು ನನ್ನ ಎದೆಗೆ ಚೂರಿ ಹಾಕಿದಂತೆ ಆಗಿದೆ. ಮಗಳಾಗಿ ಈ ರೀತಿ ನಡೆದುಕೊಳ್ಳುತ್ತಾಳೆ ಎಂದು ಕನಸಿನಲ್ಲಿಯು ಕಂಡಿರಲಿಲ್ಲ. ನಾನು ಕಾಂಗ್ರೆಸ್ ತೊರೆಯುವುದಿಲ್ಲ. ಕಾಂಗ್ರೆಸ್ ಪರವಾಗಿಯೇ ಈ ಚುನಾವಣೆಯಲ್ಲಿ ಕೆಲಸ ಮಾಡುತ್ತೇನೆ. ಅವರು ಬಿಜೆಪಿ ಸೇರ್ಪಡೆಯಾದ ವಿಚಾರ ಈಗಷ್ಟೆ ಗೊತ್ತಾಯಿತು. ಮನವೊಲಿಸುವ ಪ್ರಯತ್ನ ಮಾಡುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.
ರಾಜಕೀಯ ಅವಕಾಶ ಇತ್ತು
ರಾಜನಂದಿನಿ ಅವರು ನನ್ನೊಂದಿಗೆ ಈ ವಿಚಾರ ಹೇಳಿಕೊಳ್ಳಲಿಲ್ಲ. ಈ ಬಗ್ಗೆ ಬೇಸರವಿದೆ. ಕಾಂಗ್ರೆಸ್ ಪಕ್ಷದಲ್ಲಿಯೇ ರಾಜಕೀಯ ಅವಕಾಶವಿತ್ತು. ಒಮ್ಮೆ ಯು ಬಿಜೆಪ ಸೇರ್ಪಡೆ ಕುರಿತು ನನ್ನೊಂದಿಗೆ ಹೇಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200