SHIVAMOGGA LIVE NEWS | 11 APRIL 2023
SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿಯ ಪತ್ರ ವೈರಲ್ ಆಗುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಗಳು (Followers) ಗೊಂದಲಕ್ಕೀಡಾಗಿದ್ದಾರೆ. ಈಶ್ವರಪ್ಪ ಅವರ ಮನೆ ಬಳಿ ದೌಡಾಯಿಸಿದ್ದಾರೆ.
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಅವರ ಮನೆ ಜಯಲಕ್ಷ್ಮಿ ನಿವಾಸದ ಮುಂದೆ ಕಾರ್ಯಕರ್ತರು (Followers) ಜಮಾಯಿಸಿದ್ದಾರೆ. ಬಹುತೇಕ ಅಭಿಮಾನಿಗಳು ರಾಜಕೀಯ ನಿವೃತ್ತಿ ನಿರ್ಧಾರದ ವಿಚಾರ ಕೇಳಿ ಶಾಕ್ ಆಗಿದೆ. ಇದು ಸತ್ಯವೋ ಸುಳ್ಳೊ ಗೊತ್ತಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಇನ್ನೂ ಕೆಲವರು ನಿರ್ಧಾರ ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು.
ಇದನ್ನೂ ಓದಿ – ಈಶ್ವರಪ್ಪ ರಾಜಕೀಯ ನಿವೃತ್ತಿಯ ಪತ್ರ ವೈರಲ್, ಏನಿದೆ ಪತ್ರದಲ್ಲಿ?
ಇನ್ನು, ಈಶ್ವರಪ್ಪ ಅವರು ಮನೆಯಲ್ಲೇ ಇದ್ದು, ಹೊರಗೆ ಬಂದಿಲ್ಲ. ಕೆಲವೇ ಕೆಲವು ಮುಖಂಡರು ಮನೆಯೊಳಗೆ ಹೋಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200