SHIVAMOGGA LIVE NEWS | 22 APRIL 2023
SHIMOGA : ಕಾಂಗ್ರೆಸ್ ಟಿಕೆಟ್ ಸಿಗದೆ ಜೆಡಿಎಸ್ನಲ್ಲೂ ನಿರಾಸೆ ಗೊಳಗಾಗಿ ತಟಸ್ಥವಾಗಿ ಉಳಿಯಲು ಬಯಸಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ (JDS) ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಬೆಂಗಳೂರಲ್ಲಿ ಜೆಡಿಎಸ್ (JDS) ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆ.ಬಿ.ಪ್ರಸನ್ನಕುಮಾರ್ ಮತ್ತು ಅವರ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್
ಜೆಡಿಎಸ್ನ ಟಿಕೆಟ್ ಸಿಗುವುದಿಲ್ಲವೆಂಬುದು ಬುಧವಾರ ರಾತ್ರಿ ಖಾತ್ರಿಯಾದ ಬಳಿಕ, ಈ ಬಾರಿ ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸದೆ ತಟಸ್ಥರಾಗಿ ಉಳಿಯಲು ಬಯಸಿದ್ದರು. ಆದರೆ, ರಾಜಕೀಯ ಭವಿಷ್ಯದ ಉದ್ದೇಶದಿಂದ ಮತ್ತು ಅಭಿಮಾನಿಗಳ ಒತ್ತಾಸೆ ಮೇರೆಗೆ ಜೆಡಿಎಸ್ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಮತ್ತು ಅಭ್ಯರ್ಥಿ ಆಯನೂರು ಮಂಜುನಾಥ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200