ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020
ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷವನ್ನು ಟೀಕಿಸದಿದ್ದರೆ ತಿಂದ ಅನ್ನ ಕರಗುವುದಿಲ್ಲ.ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಯಾವುದೇ ಚರ್ಚೆ ಮಾಡದೆ ಕೃಷಿ ಮಸೂದೆ ಜಾರಿ ಮಾಡಿರುವ ಬಗ್ಗೆ ಪುನರ್ ಮನನ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷ ರೈತರನ್ನು ದಿಕ್ಕುತಪ್ಪಿಸುತ್ತಿದೆ ಅಂತಾ ಇತ್ತೀಚೆಗೆ ಸಂಸದ ಬಿ.ವೈ.ರಾಘವೇಂದ್ರ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವಕ್ತಾರ ಕೆ.ಬಿ.ಪ್ರಸನ್ನಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆ.ಬಿ ಪ್ರಸನ್ನಕುಮಾರ್, ಕೃಷಿ ಮಸೂದೆ ರೈತ ಪರವಾಗಿದೆ ಎನ್ನುವ ಸಂಸದರು ಮತ್ತು ಸಚಿವರು, ತಮ್ಮದೆ ಪಕ್ಷದ ಅಂಗವಾದ ಭಾರತೀಯ ಕಿಸಾನ್ ಮಂಚ್ ಏಕೆ ಪ್ರತಿಭಟಿಸುತ್ತಿದೆ. ಅಲ್ಲದೇ ಕೇಂದ್ರ ಮಂತ್ರಿ ಪದವಿ ತ್ಯಜಿಸಿ ಶಿರೋಮಣಿ ಅಕಾಲಿದಳ ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಪ್ರಶ್ನಿಸಿದರು.
ರೈತ ವಿರೋಧಿ ಕಾಯ್ದೆಗಳ ಜಾರಿ ವಿರೋಧಿಸಿ ದೇಶಾದ್ಯಂತ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ಈ ಕಾಯ್ದೆಯನ್ನು ಪುನರ್ ವಿಮರ್ಶಿಸಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ಸರ್ಕಾರ ಸುಗ್ರಿವಾಜ್ಞೆ ಮೂಲಕ ಕೃಷಿ ಮಸೂದೆಯನ್ನು ಜಾರಿಗೊಳಿಸಲು ಹೊರಟಿದೆ. ಇದು ರೈತ ವರ್ಗದ ಮೇಲೆ ಗದಾಪ್ರಹಾರ ಮಾಡಿದಂತಾಗಿದೆ. ಬಹುರಾಷ್ಟ್ರೀಯ ಕಂಪೆನಿಗಳ, ರಿಯಲ್ ಎಸ್ಟೇಟ್ ವ್ಯಾಪಾರಿಗಳ ಹಿತರಕ್ಷಣೆಗಾಗಿ ಈ ಕಾಯ್ದೆ ತಿದ್ದುಪಡಿ ಮಾಡಿದೆ ಎಂದು ಟೀಕಿಸಿದರು.
ರೈತರು ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಒಪ್ಪಬಾರದು. ಎಪಿಎಂಸಿ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಬಳಸಿಕೊಂಡು ಮೋದಿ ಸರ್ಕಾರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥೆಯನ್ನೇ ಹಾಳು ಮಾಡಿ ರೈತರನ್ನು ಗುಲಾಮಗಿರಿಗೆ ದೂಡುವ ಈ ಕಾಯ್ದೆ ತಂದಿದ್ದಾರೆ ಇದನ್ನು ಹೇಗೆ ಒಪ್ಪಲು ಸಾಧ್ಯ ಎಂದರು.
ಮುಖಂಡರಾದ ಎನ್.ರಮೇಶ್, ಅನಿತಾ ಕುಮಾರಿ, ಹೆಚ್.ಸಿ.ಯೋಗೀಶ್, ಆರ್.ಸಿ.ನಾಯ್ಕ, ಕೆ.ರಂಗನಾಥ್, ರಂಗೇಗೌಡ, ಚಾಮರಾಜ್, ಶ್ಯಾಮ ಸುಂದರ್ ಇನ್ನಿತರರು ಸುದ್ದಿಗೊಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















