ಗೀತಾ ಶಿವರಾಜ್‌ ಕುಮಾರ್‌ ಬಳಿ 11 ಕೆ.ಜಿ ಆಭರಣ, ಮಗಳ ಖಾತೆಯಲ್ಲಿ ಕೇವಲ 100 ರೂ., ಒಟ್ಟು ಆಸ್ತಿ ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 APRIL 2024

LOKSABHA ELECTION : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ತಮ್ಮ ಪತಿ, ನಟ ಶಿವರಾಜ್‌ ಕುಮಾರ್‌, ಪುತ್ರಿ ನಿವೇದಿತಾ ಅವರ ಒಟ್ಟು ಆಸ್ತಿ 89.06 ಕೋಟಿ ರೂ. ಎಂದು ತಿಳಿಸಿದ್ದಾರೆ.

ಮೂವರ ಬಳಿ ಇರುವ ಹಣವೆಷ್ಟು?

ಗೀತಾ ಶಿವರಾಜ್‌ ಕುಮಾರ್‌ ಅವರ ಕೈಯಲ್ಲಿ 3 ಲಕ್ಷ ರೂ., ಕೋಟಕ್‌ ಮಹಿಂದ್ರ ಬ್ಯಾಂಕ್‌ನಲ್ಲಿ 64,821 ರೂ., ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಒಂದು ಖಾತೆಯಲ್ಲಿ 3,42,910 ರೂ., ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಮತ್ತೊಂದು ಖಾತೆಯಲ್ಲಿ 60,52, 935 ರೂ. ಹೊಂದಿದ್ದಾರೆ. ಪತಿ ಶಿವರಾಜ್‌ ಕುಮಾರ್‌ ಅವರ ಕೈಯಲ್ಲಿ 22,58,338 ರೂ. ಹೊಂದಿದ್ದಾರೆ. ಕೋಟಕ್‌ ಮಹೀಂದ್ರ ಬ್ಯಾಂಕ್‌ನಲ್ಲಿ 46,54,908 ರೂ., ಹೆಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ 4,35,93,810 ರೂ., ಹೊಂದಿದ್ದಾರೆ. ಪುತ್ರಿ ನಿವೇದಿತಾ ಅವರು ಹೆಚ್‌ಡಿಎಫ್‌ಸಿ ಬ್ಯಾಂಕ್‌ ಖಾತೆ ಹೊಂದಿದ್ದು ಅದರಲ್ಲಿ ಕೇವಲ 100 ರೂ., ಇದೆ ಎಂದು ತಿಳಿಸಿದ್ದಾರೆ.

ಮುತ್ತು ಸಿನಿ ಸರ್ವಿಸಸ್‌ನಲ್ಲಿ ಗೀತಾ ಶಿವರಾಜ್‌ ಕುಮಾರ್‌ 25,60,261 ರೂ., ಶಿವರಾಜ್‌ ಕುಮಾರ್‌ 1,64,27,423 ರೂ., ನಿವೇದಿತಾ 1 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ. ಗೀತಾ ಪಿಕ್ಚರ್‌ಗೆ ಶಿವರಾಜ್‌ ಕುಮಾರ್‌ ಅವರು 6 ಕೋಟಿ ರೂ., ಧ್ರುವಕುಮಾರ್‌ ಎಂಬುವವರಿಗೆ 2.30 ಕೋಟಿ ರೂ., ಇತರರಿಗೆ 2.13 ಕೋಟಿ ರೂ. ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು, ಗೀತಾ ಮತ್ತು ಶಿವರಾಜ್‌ ಕುಮಾರ್‌ ದಂಪತಿ ಬ್ಯಾಂಕ್‌ಗಳು ಮತ್ತು ಇತರೆಡೆ 24.16 ಕೋಟಿ ರೂ. ಸಾಲ ಹೊಂದಿದ್ದಾರೆ. ಶಿವರಾಜ್‌ ಕುಮಾರ್‌ ಅವರು 95.79 ಲಕ್ಷ ರೂ. ಆದಾಯ ತೆರಿಗೆ ಪಾವತಿ ಬಾಕಿ ಉಳಿಸಿಕೊಂಡಿದ್ದಾರೆ.

Geetha Shivaraj kumar

ಕಾರುಗಳು, ಚಿನ್ನ ಬೆಳ್ಳಿ ಎಷ್ಟಿದೆ?

ಗೀತಾ ಶಿವರಾಜ್‌ ಕುಮಾರ್‌ ಅವರ ಹೆಸರಿನಲ್ಲಿ 1.07 ಕೋಟಿ ರೂ. ಮೌಲ್ಯದ ಟೊಯೋಟ ಹೈಬ್ರಿಡ್‌ ಕಾರು ಇದೆ. ಶಿವರಾಜ್‌ ಕುಮಾರ್ ಅವರ ಹೆಸರಿನಲ್ಲಿ ಟೊಯೋಟಾ ಫಾರ್ಚುನರ್‌, ಮಾರುತಿ ಎರ್ಟಿಗಾ, ವೋಲ್ವೊ ಎಸ್‌90 ವಾಹನಗಳಿವೆ. ಗೀತಾ ಶಿವರಾಜ್‌ ಕುಮಾರ್‌ ಅವರ ಬಳಿ 11,542 ಗ್ರಾಂ ಚಿನ್ನ, ವಜ್ರಾಭರಣ ಇದೆ. ಇದರ ಮೌಲ್ಯ 3.50 ಕೋಟಿ ರೂ., 30 ಕೆ.ಜಿ. ಬೆಳ್ಳಿ ವಸ್ತುಗಳಿವೆ. ಇದರ ಮೌಲ್ಯದ 3.40 ಲಕ್ಷ ರೂ. ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕೃಷಿ ಜಮೀನು, ಕಮರ್ಷಿಯಲ್‌ ಬಿಲ್ಡಿಂಗ್‌

ಕನಕಪುರದ ಚಕ್ಕನಹಳ್ಳಿಯಲ್ಲಿ ಗೀತಾ ಮತ್ತು ಶಿವರಾಜ್‌ ಕುಮಾರ್‌ ಅವರ ಜಂಟಿ ಖಾತೆಯಲ್ಲಿ 5.05 ಎಕರೆ ಕೃಷಿ ಜಮೀನು. ಶಿವರಾಜ್‌ ಕುಮಾರ್‌ ಅವರ ಹೆಸರಿನಲ್ಲಿ ತಮಿಳುನಾಡಿನ ಈರೋಡು ಜಿಲ್ಲೆಯಲ್ಲಿ 3.46 ಎಕರೆ ಕೃಷಿ ಜಮೀನು. ಗೀತಾ ಅವರ ಹೆಸರಿನಲ್ಲಿ ಕೋರಮಂಗಲದಲ್ಲಿ 2400 ಚದರ ಅಡಿಯಲ್ಲಿ ವಾಣಿಜ್ಯ ಕಟ್ಟಡ. ಬೆಂಗಳೂರಿನ ನಾಗವಾರದ ಮಾನ್ಯತಾ ರೆಸಿಡೆನ್ಸಿಯಲ್ಲಿ 32,400 ಚದರ ಅಡಿಯಲ್ಲಿ ಜಂಟಿ ಖಾತೆಯಲ್ಲಿ ಮನೆ ಇದೆ. ಇವುಗಳ ಒಟ್ಟು ಮೌಲ್ಯ 65.50 ಕೋಟಿ ರೂ. ಎಂದು ತಿಳಿಸಲಾಗಿದೆ.

ಇದನ್ನೂ ಓದಿ – ಪತ್ನಿಗೆ ಸಾಲ ನೀಡಿದ ಈಶ್ವರಪ್ಪ, ಎಲ್ಲೆಲ್ಲಿ ಎಷ್ಟು ಆಸ್ತಿ ಹೊಂದಿದ್ದಾರೆ? ನಗದು, ಚಿನ್ನಾಭರಣ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment