SHIVAMOGGA LIVE NEWS | 15 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಮೆರವಣಿಗೆ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ, ನೆಹರೂ ರಸ್ತೆ, ಗೋಪಿ ಸರ್ಕಲ್ ಮೂಲಕ ಸಾಗಿತು. ಬಾಲರಾಜ ಅರಸ್ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಲಾಯಿತು.
ಹೇಗಿತ್ತು? ಏನೇನಿತ್ತು ಮೆರವಣಿಗೆಯಲ್ಲಿ?
ಲೋಕಸಭೆ ಕ್ಷೇತ್ರದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು. ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ನಟ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.
ಶಿವಣ್ಣನ ಫೋಟೊಗೆ ಮುಗಿಬಿದ್ದ ಜನ
ಮೆರವಣಿಗೆಯ ಹಾದಿ ಉದ್ದಕ್ಕು ನಟ ಶಿವರಾಜ್ ಕುಮಾರ್ ಅವರ ಫೋಟೊಗೆ ಜನರು ಮಗಿಬಿದ್ದರು. ರಸ್ತೆಯ ಇಕ್ಕೆಲದಲ್ಲಿ ನಿಂತ ಜನರು ತಮ್ಮ ಮೊಬೈಲ್ಗಳಲ್ಲಿ ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಂಡರು. ಶಿವಣ್ಣ ಎಂದು ಜನರು ಜೋರಾಗಿ ಕೂಗಿ ಅವರ ಗಮನ ಸೆಳೆಯಲು ಯತ್ನಿಸುತ್ತಿದ್ದು ಸಮಾನ್ಯವಾಗಿತ್ತು.
ರಣ ಬಿಸಲಿನಲ್ಲಿ ನಡೆದ ಜನ
ಇನ್ನು, ವಿಪರೀತ ಬಿಸಿಲಿನಲ್ಲಿ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜನರು ಬಾಯಾರಿಕೆ ತಡೆಯಲಾಗಿದೆ ಅಲ್ಲಲ್ಲಿ ಅಂಗಡಿಗಳಲ್ಲಿ ನೀರು, ಪಾನೀಯ ಖರೀದಿಗೆ ಮುಗಿಬಿದ್ದಿದ್ದರು. ಕಾಂಗ್ರೆಸ್ ಪಕ್ಷದ ವತಿಯಿಂದ ನೀರು ವಿತರಣೆ ಮಾಡಲಾಯಿತು. ಆದರೆ ಅದು ಸಾಕಾಗದರೆ ಜನರು ಪರಿತಪಿಸಿದರು.
ಇದನ್ನೂ ಓದಿ – ಬೆಂಗಳೂರಿನಲ್ಲಿರುವ ಶಿವಮೊಗ್ಗದವರ ಮತಗಳಿಗೆ ಲಗ್ಗೆ ಹಾಕಿದ ಬಿಜೆಪಿ, ಸಮ್ಮಿಲನದಲ್ಲಿ ಯಾರೆಲ್ಲ ಏನೇನು ಹೇಳಿದರು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200