SHIVAMOGGA LIVE NEWS | 26 MARCH 2024
SHIMOGA : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ. ಕಳೆದ ಮೂರು ದಿನದಿಂದ ವಿವಿಧ ತಾಲೂಕುಗಳಲ್ಲಿ ಹಳ್ಳಿ ಹಳ್ಳಿ ಸುತ್ತಲು ಆರಂಭಿಸಿದ್ದಾರೆ. ಮೊದಲ ಹಂತದ ಕ್ಯಾಂಪೇನ್ ಪ್ಲಾನ್ ಸಿದ್ಧವಾಗಿದ್ದು, ಅದರಂತೆ ಪ್ರಚಾರ ನಡೆಸುತ್ತಿದ್ದಾರೆ.
ಎಲ್ಲೆಲ್ಲಿ ಹೇಗಿದೆ ಜನ ಬೆಂಬಲ?
ಶಿವಮೊಗ್ಗದ ಸಂತೆ ಕಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗ್ರಾಮಸ್ಥರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ತೀರ್ಥಹಳ್ಳಿಯಲ್ಲಿ ನಡೆದ ಸಭೆಯಲ್ಲೂ ಗೀತಾ ಶಿವರಾಜ್ ಕುಮಾರ್ ಅವರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಗರ, ಹೊಸನಗರ, ಹೊಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿಯು ಕಾರ್ಯಕರ್ತರು, ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಉತ್ಸಾಹ ಮೂಡಿಸಿದೆ.
ಇನ್ನೂ ಮೂರು ದಿನ ನಿರಂತರ ಪ್ರಚಾರ
ಕ್ಷೇತ್ರವಾರಿ ಪ್ರಚಾರ ನಡೆಸುತ್ತಿರುವ ಗೀತಾ ಶಿವರಾಜ್ ಕುಮಾರ್ ಇನ್ನೂ ಮೂರು ದಿನ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಮಾ.26ರಂದು ಭದ್ರಾವತಿ, ಶಿಕಾರಿಪುರ, ಮಾ.27ರಂದು ಸೊರಬ, ಶಿವಮೊಗ್ಗ ಗ್ರಾಮಾಂತರ, ಮಾ.28ರಂದು ಬೈಂದೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ಜನ ಸೇವೆಗೆ ಅವಕಾಶ ದೊರೆತಿದೆ
ಪ್ರಚಾರ ಸಭೆಗಳಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ತಮ್ಮ ತಂದೆ ಬಂಗಾರಪ್ಪ ಅವರ ಹಾದಿಯಲ್ಲಿ ಸಾಗುವ ಭರವಸೆ ನೀಡುತ್ತಿದ್ದಾರೆ. ‘ನನಗೆ ಜನಸೇವೆ ಮಾಡುವ ಆಸೆ ಚಿಕ್ಕವಳಿದ್ದಾಗಿಂದಲೇ ಇತ್ತು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಈಗ ಜನಸೇವೆ ಮಾಡುವ ಅವಕಾಶ ದೊರೆತಿದೆ. ಈ ಆಸೆಯನ್ನು ಸಾಕಾರ ಗೊಳಿಸಿದಲ್ಲಿ ಜನರ ದನಿಯಾಗಿರುತ್ತೇನೆ. ನನ್ನ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮಾಡಿದ ಜನಪರ ಸಾಧನೆಗಳು ಜನರ ಮನಸ್ಸಿನಲ್ಲಿವೆ. ಅವರ ಹಾದಿಯಲ್ಲಿ ಸಾಗಲು ಬಯಸಿದ್ದೇನೆ.ʼ ಎಂದು ಹೇಳುತ್ತಿದ್ದಾರೆ.
ಇದನ್ನೂ ಓದಿ – ‘ಇಲ್ಲಿ ಯಾರು ನಮ್ಮವರು?’ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳನ್ನು ಕಾಡುತ್ತಿರುವ ಪ್ರಶ್ನೆ ಇದು, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200