ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಭದ್ರಾವತಿ ಬೈಪಾಸ್ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ ಕೋರಲಾಯಿತು. ಮಧು ಬಂಗಾರಪ್ಪ ಅವರಿಗೆ ಸನ್ಮಾನ ಮಾಡಿ ಶುಭ ಹಾರೈಸಲಾಯಿತು.
ಇನ್ನು, ಮಲವಗೊಪ್ಪದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು, ಮಧು ಬಂಗಾರಪ್ಪ ಅವರ ಬೆಂಬಲಿಗರು ಈ ವೇಳೆ ಇದ್ದರು
ಶಿವಮೊಗ್ಗದಲ್ಲಿ ಸ್ವಾಗತ, ಮೆರವಣಿಗೆ
ಎಂ.ಆರ್.ಎಸ್ ಸರ್ಕಲ್ ನಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಧು ಬಂಗಾರಪ್ಪ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ನೂರಾರು ಕಾರ್ಯಕರ್ತರ ಘೋಷಣೆಯೊಂದಿಗೆ ಮಧು ಬಂಗಾರಪ್ಪ ಅವರಿಗೆ ಮೆರವಣಿಗೆ ಮಾಡಲಾಯಿತು.
ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್.ರಸ್ತೆ ಮಾರ್ಗವಾಗಿ ಗೋಪಿ ಸರ್ಕಲ್ ವರೆಗೆ ಬೈಕ್ ರಾಲಿ ಮೂಲಕ ಮಧು ಬಂಗಾರಪ್ಪ ಅವರನ್ನು ಕರೆತರಲಾಯಿತು. ಗೋಪಿ ಸರ್ಕಲ್ ನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200