ಶಿವಮೊಗ್ಗ ಲೈವ್.ಕಾಂ | 01 ಏಪ್ರಿಲ್ 2019
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮೈತ್ರಿ ಪಕ್ಷಗಳ ಕ್ಯಾಂಡಿಡೇಟ್ ಮಧು ಬಂಗಾರಪ್ಪ ನಡುವಿನ ಟೈಟ್ ಫೈಟ್’ನ ನಡುವೆ, ಪಕ್ಷೇತರ ಅಭ್ಯರ್ಥಿಗಳ ಅಬ್ಬರ ಹೆಚ್ಚಾಗಿದೆ. ಈವರೆಗೂ ಐವರು ಅಭ್ಯರ್ಥಿಗಳು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು, ನಾಮಪತ್ರ ಸಲ್ಲಿಸಿದ್ದಾರೆ.
ಯಾರೆಲ್ಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಶಶಿಕುಮಾರ್ ಗೌಡ | ಭದ್ರಾವತಿಯ ಶಶಿಕುಮಾರ್ ಎಸ್.ಗೌಡ, ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಬಿ.ವೈ.ರಾಘವೇಂದ್ರ ಮತ್ತು ಮಧು ಬಂಗಾರಪ್ಪ ವಿರುದ್ಧ ಸ್ಪರ್ಧಿಸಿ 17 ಸಾವಿರ ಮತಗಳನ್ನು ಪಡೆದಿದ್ದರು. ಈ ಬಾರಿಯೂ ಪಕ್ಷೇತರ ಅಭ್ಯರ್ಥಿಯಾಗಿ ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಸಿದ್ದಾರೆ.
ಗುಡ್ಡಪ್ಪ | ಬಹುಜನ ಸಮಾಜ ಪಕ್ಷದಿಂದ, ಗುಡ್ಡಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 30ರಂದು ಗುಡ್ಡಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಶೇಖರ್ ನಾಯ್ಕ | ಶಿವಮೊಗ್ಗದ ಅಶೋಕ ನಗರದ ಶೇಖರ್ ನಾಯ್ಕ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಉಮೇಶಪ್ಪ | ಶಿಕಾರಿಪುರ ತಾಲೂಕಿನ ಬಸವನಂದಿಹಳ್ಳಿ ಗ್ರಾಮದ ಉಮೇಶಪ್ಪ ಅವರು, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಕೃಷ್ಣ | ಮತ್ತೊಂದೆಡೆ ಬಳ್ಳಾರಿ ಜಿಲ್ಲೆಯ ಶೆರೇಶ್ವರ ಗುಡಿ ಬೀದಿಯ ಕೃಷ್ಣ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 4ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಹಾಗಾಗಿ ನಾಮಪತ್ರ ಸಲ್ಲಿಸುವ ಸ್ವತಂತ್ರ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಏಪ್ರಿಲ್ 8ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200