ʼಇವತ್ತಿಂದಲೇ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆʼ

NAMMUR NEWS NEW PROMO 1 1➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021

ಮಧು ಬಂಗಾರಪ್ಪ ಜೆಡಿಎಸ್‌ ತೊರೆದ ಬೆನ್ನಿಗೆ ಜಿಲ್ಲೆಯಲ್ಲಿ ಪಕ್ಷಕ್ಕೆ ಅಘಾತ ಎದುರಾಗಿದೆ. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್‌ನತ್ತ ವಲಸೆಗೆ ಸಿದ್ಧವಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಜಿ.ಡಿ.ಮಂಜುನಾಥ್‌, ನಾವೆಲ್ಲ ಈ ಕ್ಷಣದಿಂದ ಜೆಡಿಎಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಇದು ಮೊದಲ ಕಂತಿನ ರಾಜೀನಾಮೆಯಾಗಿದ್ದು, ಇನ್ನಷ್ಟು ಕಾರ್ಯಕರ್ತರು ಮಧು ಬಂಗಾರಪ್ಪ ಅವರನ್ನು ಅನುಸರಿಸಲಿದ್ದಾರೆ ಎಂದು ತಿಳಿಸಿದರು.

ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ ಸೇರ್ಪಡೆಯಾದ ಹಿನ್ನೆಲೆ, ಜಿಲೆಯ ವಿವಿಧೆಡೆಯ ಕಾರ್ಯಕರ್ತರು ಜೆಡಿಎಸ್‌ ತೊರೆಯುತ್ತಿದ್ದಾರೆ. ಯುವ ಜೆಡಿಎಸ್‌ ಕಾರ್ಯಕರ್ತರು, ಕುಂಸಿ ಭಾಗದ ಕಾರ್ಯಕರ್ತರು ಇವತ್ತು ಇಲ್ಲಿದ್ದೇವೆ. ತೀರ್ಥಹಳ್ಳಿಯಲ್ಲಿ ಇವತ್ತು ಸಭೆ ನಡೆಯುತ್ತಿದೆ. ಇನ್ನು, ಸೊರಬ, ಸಾಗರದಲ್ಲೂ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಮಂಜುನಾಥ್‌ ತಿಳಿಸಿದರು.

ಮುಂದಿನ ವಾರ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ಮಂಜುನಾಥ್‌ ಹೇಳಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment