ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021
ಮಧು ಬಂಗಾರಪ್ಪ ಜೆಡಿಎಸ್ ತೊರೆದ ಬೆನ್ನಿಗೆ ಜಿಲ್ಲೆಯಲ್ಲಿ ಪಕ್ಷಕ್ಕೆ ಅಘಾತ ಎದುರಾಗಿದೆ. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ನತ್ತ ವಲಸೆಗೆ ಸಿದ್ಧವಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಜಿ.ಡಿ.ಮಂಜುನಾಥ್, ನಾವೆಲ್ಲ ಈ ಕ್ಷಣದಿಂದ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಇದು ಮೊದಲ ಕಂತಿನ ರಾಜೀನಾಮೆಯಾಗಿದ್ದು, ಇನ್ನಷ್ಟು ಕಾರ್ಯಕರ್ತರು ಮಧು ಬಂಗಾರಪ್ಪ ಅವರನ್ನು ಅನುಸರಿಸಲಿದ್ದಾರೆ ಎಂದು ತಿಳಿಸಿದರು.
ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆ, ಜಿಲೆಯ ವಿವಿಧೆಡೆಯ ಕಾರ್ಯಕರ್ತರು ಜೆಡಿಎಸ್ ತೊರೆಯುತ್ತಿದ್ದಾರೆ. ಯುವ ಜೆಡಿಎಸ್ ಕಾರ್ಯಕರ್ತರು, ಕುಂಸಿ ಭಾಗದ ಕಾರ್ಯಕರ್ತರು ಇವತ್ತು ಇಲ್ಲಿದ್ದೇವೆ. ತೀರ್ಥಹಳ್ಳಿಯಲ್ಲಿ ಇವತ್ತು ಸಭೆ ನಡೆಯುತ್ತಿದೆ. ಇನ್ನು, ಸೊರಬ, ಸಾಗರದಲ್ಲೂ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಂಜುನಾಥ್ ತಿಳಿಸಿದರು.
ಮುಂದಿನ ವಾರ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ಮಂಜುನಾಥ್ ಹೇಳಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]