ಶಿವಮೊಗ್ಗ ಜೆಡಿಎಸ್’ಗೆ ನೂತನ ಜಿಲ್ಲಾಧ್ಯಕ್ಷರ ನೇಮಕ, ಮತ್ತೆ ಕ್ರಿಯಾಶೀಲವಾಗುತ್ತಾ ನೆಹರೂ ರಸ್ತೆಯ ಗಾಂಧಿ ಭವನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021

ವಿಧಾನ ಪರಿಷತ್ ಚುನಾವಣೆ ಹೊತ್ತಿಗೆ ಶಿವಮೊಗ್ಗ ಜೆಡಿಎಸ್ ಘಟಕಕ್ಕೆ ನೂತನ ಸಾರಥಿಯನ್ನು ನಿಯೋಜಿಸಲಾಗಿದೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಅವರಿಗೆ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜವಾಬ್ದಾರಿ ನೀಡಲಾಗಿದೆ.

ಎಂ.ಶ್ರೀಕಾಂತ್ ಅವರಿಗೆ ಈ ಜವಾಬ್ದಾರಿ ನೀಡಿರುವುದು, ಸೊರಗಿರುವ ಸಂಘಟನೆಗೆ ಚೈತನ್ಯ ತುಂಬಲಿದೆ ಎಂಬುದು ಕಾರ್ಯಕರ್ತರ ನಂಬಿಕೆಯಾಗಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಎಂಟು ವರ್ಷ ಜಿಲ್ಲಾಧ್ಯಕ್ಷರಾಗಿದ್ದರು

ಶ್ರೀಕಾಂತ್ ಅವರು ಈ ಹಿಂದೆ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಎಂಟು ವರ್ಷ ಜೆಡಿಎಸ್ ಪಕ್ಷವನ್ನು ಜಿಲ್ಲೆಯಲ್ಲಿ ಮುನ್ನಡೆಸಿದ್ದರು. ಇವರ ಅವಧಿಯಲ್ಲಿ ಪಕ್ಷ ಸದೃಢವಾಗಿ ಸಂಘಟನೆಯಾಗಿತ್ತು. ಜಿಲ್ಲೆಯಲ್ಲಿ ಮೂವರು ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರು. ಆದರೆ ವಿವಿಧ ರಾಜಕೀಯ ಕಾರಣಕ್ಕೆ ಶ್ರೀಕಾಂತ್ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿತ್ತು.

ಎಂಟು ತಿಂಗಳಿಂದ ಜಿಲ್ಲಾಧ್ಯಕ್ಷರಿಲ್ಲ

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಆರ್.ಎಂ.ಮಂಜುನಾಥ ಗೌಡ ಅವರು ಪಕ್ಷ ತೊರೆದರು. ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಹಾಗಾಗಿ ಎಂಟು ತಿಂಗಳಿಂದ ಜಿಲ್ಲಾಧ್ಯಕ್ಷ ಹುದ್ದೆ ಖಾಲಿ ಉಳಿದಿತ್ತು. ಇದೆ ಕಾರಣಕ್ಕೆ ಪಕ್ಷದ ಸಂಘಟನೆಯು ಕುಂಟಿತವಾಗಿತ್ತು.

ಗಾಂಧಿ ಭವನ ಸದಾ ಬಂದ್

ಜಿಲ್ಲಾಧ್ಯಕ್ಷರಿಲ್ಲ, ಕಾರ್ಯಕರ್ತರು ಇಲ್ಲದೆ ಜೆಡಿಎಸ್ ಜಿಲ್ಲಾ ಕಚೇರಿ ಸದಾ ಬಂದ್ ಆಗಿರುತ್ತದೆ. ನೆಹರೂ ರಸ್ತೆಯಲ್ಲಿರುವ ಗಾಂಧಿ ಭವನ ಚಟುವಟಿಕೆ ಇಲ್ಲದೆ ಕಳೆಗುಂದಿದೆ. ಮುಖಂಡರಿಲ್ಲ, ಹೊಸ ಆಲೋಚನೆಗಳಿಲ್ಲ, ಕಾರ್ಯಕ್ರಮಗಳು ಇಲ್ಲದೆ ಜೆಡಿಎಸ್ ಜಿಲ್ಲಾ ಕಚೇರಿ ಬಣಗುಡುತ್ತಿತ್ತು.

ಮತ್ತೊಮ್ಮೆ ಎಂ.ಶ್ರೀಕಾಂತ್ ಅವರು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿರುವುದು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಜಿಲ್ಲೆಯಲ್ಲಿ ಪಕ್ಷದ ಇರುವಿಕೆ ಸಾಬೀತು ಮಾಡುವ ಪ್ರಮುಖ ಚುನಾವಣೆಗಳಾಗಿವೆ. ಇದರ ಬೆನ್ನಿಗೆ ವಿಧಾನ ಸಭೆ ಚುನಾವಣೆಯು ಎದುರಾಗಲಿದೆ. ಇವುಗಳ ಹೊತ್ತಿಗೆ ಪಕ್ಷವನ್ನು ಪುನರ್ ಸಂಘಟಿಸುವ ಮಹತ್ವದ ಜವಾಬ್ದಾರಿ ಶ್ರೀಕಾಂತ್ ಅವರ ಹೆಗಲೇರಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment