ಶಿವಮೊಗ್ಗ ಜೆಡಿಎಸ್ ಕಾರ್ಯಕರ್ತರ ಸಭೆ, ಮಂಜುನಾಥಗೌಡ ವಿರುದ್ಧ ಆಕ್ರೋಶ, ನಿಖಿಲ್, ಪ್ರಜ್ವಲ್ ಕರೆಸುವಂತೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021

ಶಿವಮೊಗ್ಗ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು, ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಆಗ್ರಹ ಕೇಳಿ ಬಂತು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ನೇತೃತ್ವದಲ್ಲಿ ಜೆಡಿಎಸ್‍ನ ಜಿಲ್ಲಾ ಕಚೇರಿ ಗಾಂಧಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ

ತಾಲೂಕು ಘಟಕದ ಅಧ್ಯಕ್ಷರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಪಕ್ಷ ಸಂಘಟನೆ ಕುರಿತು ಮಾತನಾಡಿದ ಬಹುತೇಕರು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಒತ್ತಾಯಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಅವರಿಗೆ ಜಿಲ್ಲಾ ಜೆಡಿಎಸ್‍ನ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು.

ಏನೇನು ಅಭಿಪ್ರಾಯ ವ್ಯಕ್ತವಾಯ್ತು?

ಹಾಗೆ ಬಂದವರು, ಹೋದವರು – ಸಭೆಯಲ್ಲಿ ಆರ್‍.ಎಂ.ಮಂಜುನಾಥಗೌಡ ಅವರ ವಿರುದ್ಧ ಮುಖಂಡರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹಾಗೆ ಬಂದು ಹೀಗೆ ಹೋಗುವವರಿಗೆ ಅಧಿಕಾರ ಕೊಡಬೇಡಿ. ಮಂಜುನಾಥಗೌಡ ಅವರನ್ನು ರಾತ್ರೋರಾತ್ರಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅದು ಪಕ್ಷದ ಕ್ರಮವೆ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಬೈಕ್ ಜಾಥಾ, ಲಕ್ಷ್ಮೀ ಟಾಕೀಸ್ ಬಳಿ ಟೈರ್ಗೆ ಬೆಂಕಿ ಹಚ್ಚಲು ಯತ್ನ

ಕಾರ್ಯಕರ್ತರಿಗೆ ಅಧಿಕಾರ ಕೊಡಲಿಲ್ಲ – ಜಿಲ್ಲೆಯಲ್ಲಿ ಪಕ್ಷಕ್ಕೆ ಕಾರ್ಯಕರ್ತರಿದ್ದಾರೆ. ಆದರೆ ಅಧಿಕಾರಕ್ಕೆ ಬಂದಾಗ ಕಾರ್ಯಕರ್ತರಿಗೆ ಸ್ಥಾನಮಾನ ಕೊಡಲಿಲ್ಲ. ಬೆಂಗಳೂರು ಕೇಂದ್ರಿತವಾಗಿ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿ ನೀಡಲಾಯಿತು.

ಇದನ್ನೂ ಓದಿ | ಶಿವಮೊಗ್ಗಕ್ಕೆ ಪ್ರಜ್ವಲ್, ಶಾರದಾ ಪೂರ್ಯನಾಯ್ಕ್ ವೀಕ್ಷಕರು, ಜೆಡಿಎಸ್ ಪರಿಸ್ಥಿತಿ ಹೇಗಿದೆ? ಏನೆಲ್ಲ ಸವಾಲಿದೆ?

ಶ್ರೀಕಾಂತ್‍ಗೆ ಮುಂದಾಳತ್ವ ಕೊಡಿ – ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಅವರಿಗೆ ಅಧಿಕಾರ ಕೊಡಿ ಎಂದು ಕಾರ್ಯಕರ್ತರು ಆಗ್ರಹಿಸಿದರು. ‘ಎಂ.ಶ್ರೀಕಾಂತ್ ಅವರಿಗೆ ಅಧಿಕಾರ ಕೊಟ್ಟು, ಅವರನ್ನು ಮುಂದೆ ಬಿಟ್ಟು, ಉಳಿದವರೆಲ್ಲ ಹಿಂದೆ ಸರಿಯುವುದಲ್ಲ. ಅವರ ಮುಂದಾಳತ್ವದಲ್ಲಿ ಸಂಘಟನೆ ಆಗಬೇಕು. ಪಕ್ಷಕ್ಕೆ ಹೈಕಮಾಂಡ್‍ನಿಂದ ಹಣಕಾಸಿನ ನೆರವು ಕೂಡ ಕೊಡಬೇಕು’ ಎಂದು ಕುರುಣಾಮೂರ್ತಿ ಹೇಳಿದರು.

ಮಂಜುನಾಥಗೌಡ ಗೈರು, ಆಕ್ರೋಶ

ಕಾರ್ಯಕರ್ತರ ಸಭೆಗೆ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಗೈರಾಗಿದ್ದರು. ‘ಅವರು ಕೋರ್ಟ್‍ಗೆ ಹಾಜರಾಗಬೇಕಿರುವ ಹಿನ್ನೆಲೆ ಸಭೆಗೆ ಬಂದಿಲ್ಲ. ಹಲವು ಹೋರಾಟ ನಡೆಸಿದ್ದಾರೆ. ಪಕ್ಷದ ಸಂಘಟನೆ ಮಾಡುತ್ತಿದ್ದಾರೆ’ ಎಂದು ತೀರ್ಥಹಳ್ಳಿಯ ಸುಂದರೇಶ್ ತಿಳಿಸಿದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಕಾಂತರಾಜು ಅವರು, ಮಂಜುನಾಥಗೌಡ ಅವರಿಂದಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ. ಅಧಿಕಾರ ಇದ್ದಾಗ ಇದ್ದರು. ಅಧಿಕಾರ ಹೋದ ಮರುದಿನದಿಂದ ಈ ಕಡೆ ಬಂದಿಲ್ಲ ಎಂದರು. ಕಾಂತರಾಜು ಅವರೊಂದಿಗೆ ಹಲವರು ಧ್ವನಿಗೂಡಿಸಿದರು. ಮಧ್ಯಪ್ರವೇಶಿಸಿದ ಶ್ರೀಕಾಂತ್ ಅವರು, ಮಂಜುನಾಥಗೌಡ ಅವರು ತೀರ್ಥಹಳ್ಳಿಯಲ್ಲಿ ಸಂಘಟನೆ ಮಾಡುತ್ತಿದ್ದಾರೆ. ಆದರೆ ಅವರು ಜಿಲ್ಲಾ ಮಟ್ಟದಲ್ಲಿ ಸಂಘಟನೆ ಮಾಡಬೇಕು ಎಂದು ಎಲ್ಲರನ್ನು ಸಮಾಧಾನಪಡಿಸಿದರು.

ಇಬ್ಬರು ಸ್ಟಾರ್ ಪ್ರಚಾರಕರಿದ್ದಾರೆ, ಕರೆಯಿಸಿ

ಜೆಡಿಎಸ್ ಪಕ್ಷದಲ್ಲಿ ಇಬ್ಬರು ಸ್ಟಾರ್ ಪ್ರಚಾರಕರಿದ್ದಾರೆ. ಅವರನ್ನು ಕರೆಯಿಸಿ ಯುವಕರ ಸಂಘಟನೆ ಮಾಡಿ. ಯುವಕರಿಲ್ಲದೆ ಪಕ್ಷ ಬಲಿಷ್ಠವಾಗುವುದಿಲ್ಲ. ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ  ಅವರು ಬಂದರೆ ಯುವಕರು ಒಗ್ಗೂಡುತ್ತಾರೆ ಎಂಬ ಸಲಹೆಯು ಕೇಳಿ ಬಂತು.

ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಗೌರವವಿಲ್ಲ

ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್ ಮಾತನಾಡಿ, ಭದ್ರಾವತಿಯಲ್ಲಿ ಜೆಡಿಎಸ್ ಎಂದರೆ ಅಪ್ಪಾಜಿ. ಅವರು ಹೇಳಿದ್ದನ್ನು ಪಾಲಿಸುತ್ತಿದ್ದೆವು. ಆದರೆ ನಾವು ಜೆಡಿಎಸ್‍ನ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರೂ, ನಮಗೆ ಪಕ್ಷದಲ್ಲಿ ಯಾವುದೆ  ಗೌರವವಿಲ್ಲ. ಬೇರೆ ಪಕ್ಷಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಗೌರವ ನೀಡಿ, ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ನಮ್ಮಲ್ಲಿ ಅಂತಹದೆಲ್ಲ ನಡೆಯುತ್ತಲೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಸೇರಿದಂತೆ ಹಲವರು ಸಭೆಯಲ್ಲಿ ಇದ್ದರು.

151494405 1331505657210851 8445914533077845700 n.jpg? nc cat=100&ccb=3& nc sid=8bfeb9& nc ohc=Pl0lE9Xu aEAX oS Da& nc ht=scontent.fblr4 3

150789814 1331505697210847 3081565011276364190 o.jpg? nc cat=102&ccb=3& nc sid=8bfeb9& nc ohc=ARh6QrxAl2UAX F2c8e& nc ht=scontent.fblr4 1

149798985 1331505557210861 4348753781746455169 n.jpg? nc cat=109&ccb=3& nc sid=8bfeb9& nc ohc=DArcUcdoVAsAX IRMxO& nc ht=scontent.fblr4 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment