ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JUNE 2024
SHIMOGA : ಪೆಟ್ರೋಲ್, ಡಿಸೇಲ್ ಮೇಲೆ ರಾಜ್ಯ ಸರ್ಕಾರ ತೆರಿಗೆ ಹೆಚ್ಚಳ ಮಾಡಿದೆ. ಇದರ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಗೋಪಿ ಸರ್ಕಲ್ನಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್ ಭಾಷಣ (Speech) ಎಲ್ಲರ ಗಮನ ಸೆಳೆದಿತ್ತು. ಇದೇ ಪ್ರತಿಭಟನೆ ಮುಗಿಸಿ ಹೊರಡುವ ಹೊತ್ತಿಗೆ ಭಾನುಪ್ರಕಾಶ್ ಅವರಿಗೆ ಹೃದಯಾಘಾತ ಸಂಭವಿಸಿ, ನಿಧನರಾಗಿದ್ದಾರೆ.
ಭಾಷಣದಲ್ಲಿ ಭಾನುಪ್ರಕಾಶ್ ಏನೆಲ್ಲ ಹೇಳಿದರು?
‘ಇವತ್ತು ಬೆಳಗ್ಗೆ ಮೋಹನ್ ರೆಡ್ಡಿ ಅವರು ಕರೆ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಅಣಕು ಶವಯಾತ್ರೆ ಇದೆ ಬನ್ನಿ ಎಂದರು. ಅಲ್ಲಪ್ಪ, ಕಾಂಗ್ರೆಸ್ ಪಕ್ಷವನ್ನು ಉಳಿಸೋಕೆ ಏನು ಪ್ರಯತ್ನ ಮಾಡಲಿಲ್ಲವೆ ಎಂದು ಕೇಳಿದೆ. ವೈದ್ಯರು ಬಹಳ ಪ್ರಯತ್ನಪಟ್ಟರು ಅಗಲಿಲ್ಲ ಎಂದರು. ಸಂಬಂಧಿಕರಿಗೆ ವಿಷಯ ತಿಳಿಸಿದಿರಾ ಎಂದು ಕೇಳಿದೆ. ಸಂಬಂಧಿಕರ ಪೈಕಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದೇವೆ ಎಂದರು. ಅಲ್ಲಿ ನೋಡಿ ಅವರಿಬ್ಬರು ಇದ್ದಾರೆ.’ (ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಖವಾಡ ಧರಿಸಿದ್ದವರತ್ತ ತೋರಿಸಿ).

ತುಘಲಕ್ ದರ್ಬಾರ್ ಮಾಡುತ್ತಿದ್ದಾರೆ
‘ನಮಗೆ ಅವಕಾಶ ಕೊಟ್ಟರೆ ಬದಲಾವಣೆ ಮಾಡುತ್ತೇವೆ ಅಂದಿದ್ದರು. ಆದರೆ ಈತನಕ ಏನು ಮಾಡಿದ್ದಾರೆ? 1459 ಕೋಟಿ ರೂ. ಎಲ್ಲಿ ಹೋಯ್ತು. ಇದಕ್ಕಾಗಿ ಶಿವಮೊಗ್ಗದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವತ್ತಿನ ಹೋರಾಟ ಕಾಂಗ್ರೆಸ್ನ ಮತದಾರರನ್ನು ಎಚ್ಚರಿಸುವ ಪ್ರಯತ್ನ. ಡಿಸೇಲ್, ಪೆಟ್ರೋಲ್ ದರ ಎರಿಕೆಯಿಂದಾಗಿ ಎಲ್ಲದರ ಬೆಲೆಯೂ ಏರಿಸಿದಂತಾಗಿದೆ. ತುಘಲಕ್ ದರ್ಬಾರ್ ಮಾಡುತ್ತಿರುವ ಸರ್ಕಾರವನ್ನು ಬಡಿದೆಚ್ಚರಿಸಬೇಕಿದೆ. ಅದಕ್ಕಾಗಿ ಈ ಹೋರಾಟʼ ಎಂದು ಭಾನುಪ್ರಕಾಶ್ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದರು.
ಇದನ್ನೂ ಓದಿ – ಬಂಗಾರಪ್ಪಗೆ ಎದುರಾಳಿಯಾಗಿದ್ದರು, ಗಾಜನೂರಿನಿಂದ ಗೆದ್ದಿದ್ದರು, ಭಾನುಪ್ರಕಾಶ್ ಕುರಿತು ಇಲ್ಲಿದೆ 5 ಪ್ರಮುಖಾಂಶ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















