ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 APRIL 2024
SHIMOGA : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಿಗೆ ಅವರೊಂದಿಗೆ ಗುರುತಿಸಿಕೊಂಡಿರುವ ಹತ್ತು ಮಂದಿಯನ್ನು ಪಕ್ಷದಿಂದ ಉಚ್ಛಾಟಿಸುವಂತೆ ಬಿಜೆಪಿ ನಗರ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ.
ಪಕ್ಷಕ್ಕೆ ಮುಜುಗರ ತಂದಿದ್ದಾರೆ
‘ಬಿಜೆಪಿ ನಗರ ಕಾರ್ಯಕರ್ತರು ಬಂಡಾಯ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಅವರ ಜೊತೆಗೆ ಗುರುತುಸಿಕೊಂಡಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಆದ್ದರಿಂದ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಆರು ವರ್ಷ ಪಕ್ಷದಿಂದ ಉಚ್ಛಾಟಿಸಬೇಕುʼ ಎಂದು ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಹತ್ತು ಮಂದಿ ಉಚ್ಛಾಟನೆಗೆ ಶಿಫಾರಸು
ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಇ.ವಿಶ್ವಾಸ್, ಶಂಕರ್ ಗನ್ನಿ, ಎಸ್.ಜಿ.ರಾಜು, ಲಕ್ಷ್ಮಿ ಶಂಕರನಾಯ್ಕ, ಸುವರ್ಣ ಶಂಕರ್, ಆರತಿ ಆ.ಮ.ಪ್ರಕಾಶ್, ಲತಾ ಗಣೇಶ್, ಶಿವಮೊಗ್ಗ ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ.ಕಾಂತೇಶ್, ನಗರ ಉಪಾಧ್ಯಕ್ಷ ಮೋಹನ್ ರಾವ್ ಜಾಧವ್, ಸಹ್ಯಾದ್ರಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿತಾ ಮಂಜುನಾಥ್ ಉಚ್ಛಾಟನೆಗೆ ಶಿಫಾರಸು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಸೆಂಟರ್ ಮಾಲ್ನಲ್ಲಿ ಚುನಾವಣ ಮಾಡಲ್, ಹೇಗಿದೆ ಮಾದರಿ?
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














