Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ?

ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ?

07/09/2023 6:23 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 7 SEPTEMBER 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ‌ಜೆಡಿಎಸ್‌ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌ ಕಾಂಗ್ರೆಸ್‌ (Congress Party) ಸೇರ್ಪಡೆಯಾಗುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಶ್ರೀಕಾಂತ್‌ ಚರ್ಚೆ ನಡೆಸಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಎಂ.ಶ್ರೀಕಾಂತ್‌ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು. ಪಕ್ಷ ಸೇರ್ಪಡೆ, ರಾಜಕೀಯ ಭವಿಷ್ಯ, ಮುಂದಿನ ಚುನಾವಣೆಗೆ ಕಾರ್ಯಕರ್ತರ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಈ ಭೇಟಿಯ ಫೋಟೊ ವೈರಲ್‌ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ಮುಂದಿನ ವಾರ ಸೇರ್ಪಡೆ

ಇನ್ನು, ಡಿ.ಕೆ.ಶಿವಕುಮಾರ್‌ ಭೇಟಿ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಎಂ.ಶ್ರೀಕಾಂತ್‌, ‘ನಿನ್ನೆ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದೇನೆ. ಮುಂದಿನ ವಾರ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ಯಾವುದೆ ಷರತ್ತುಗಳು, ಅಧಿಕಾರದ ನಿರೀಕ್ಷೆ ಇಲ್ಲದೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. 23 ವರ್ಷ ಯಾವುದೆ ನಿರೀಕ್ಷೆ, ಅಧಿಕಾರದ ಆಸೆ ಇಲ್ಲದೆ ಸಂಘಟನೆ ಮಾಡಿದ್ದೆ. ಮುಂದೆ ಕಾಂಗ್ರೆಸ್‌ ಪಕ್ಷದ ಸಂಘಟನೆ ಮಾಡುತ್ತೇನೆʼ ಎಂದು ತಿಳಿಸಿದರು.

M Srikanth with DK Shivakumar

ಬಹುಕಾಲ ಜೆಡಿಎಸ್‌ ಪಕ್ಷ ಸಂಘಟನೆ

ಎಂ.ಶ್ರೀಕಾಂತ್‌ ಜೆಡಿಎಸ್‌ ಪಕ್ಷದ ಜಿಲ್ಲೆ ಮತ್ತು ರಾಜ್ಯಮಟ್ಟದ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು. ಈ ಹಿಂದೆ ಸತತ ಎಂಟು ವರ್ಷ ಜಿಲ್ಲಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದರು. ಆ ಅವಧಿಯಲ್ಲಿ ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷ ಮೂರು ಶಾಸಕ ಸ್ಥಾನ ಗೆದ್ದಿತ್ತು.

ಇದನ್ನೂ ಓದಿ – ಆಯನೂರು ಮಂಜುನಾಥ್‌, ಶಿಕಾರಿಪುರದ ನಾಗರಾಜ ಗೌಡ ಕಾಂಗ್ರೆಸ್‌ಗೆ, ಸಭೆಯಲ್ಲಿ ಯಾರೆಲ್ಲ ಏನೇನು ಹೇಳಿದರು?

ಶ್ರೀಕಾಂತ್‌ ಅವರಿಗೆ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿತ್ತು. 2021ರ ನವೆಂಬರ್‌ನಲ್ಲಿ ಪುನಃ ಶ್ರೀಕಾಂತ್‌ ಅವರಿಗೆ ಜೆಡಿಎಸ್‌ ಜಿಲ್ಲಾಧ್ಯಕ್ಷ ಜವಾಬ್ದಾರಿ ವಹಿಸಲಾಯಿತು. 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿತು. ಮತ್ತೊಂದು ಕ್ಷೇತ್ರದಲ್ಲಿ ಸ್ವಲ್ಪ ಅಂತರದಲ್ಲಿ ಸೋಲಾಯಿತು.

ಆಯನೂರು ಬೆನ್ನಿಗೆ ‍ಶ್ರೀಕಾಂತ್‌ ಸೇರ್ಪಡೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಶಿವಮೊಗ್ಗ ಅಭ್ಯರ್ಥಿಯಾಗಿದ್ದ ಆಯನೂರು ಮಂಜುನಾಥ್‌ ಈಚೆಗೆ ಕಾಂಗ್ರೆಸ್‌ (Congress Party) ಸೇರ್ಪಡೆಯಾಗಿದ್ದಾರೆ. ಅವರ ಬೆನ್ನಿಗೆ ಎಂ.ಶ್ರೀಕಾಂತ್‌ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಶ್ರೀಕಾಂತ್‌ ಸೇರ್ಪಡೆ ಕಾಂಗ್ರೆಸ್‌ ಪಕ್ಷದಲ್ಲಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 070923 Incident at javalli cross near holehonnur Shimoga BREAKING NEWS | ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 7 ಸೆಪ್ಟೆಂಬರ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಇದನ್ನೂ ಓದಿ

-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Congress-leader-Sowmya-Reddy-in-Shimoga.
POLITICSSHIVAMOGGA CITY

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?