Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?

ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?

27/05/2023 9:59 AM
ನಿತಿನ್‌ ಕೈದೊಟ್ಲು

SHIVAMOGGA LIVE | 27 MAY 2023

BANGALORE : ರಾಜ್ಯದ ನೂತನ ಸಚಿವರ (Minister) ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿದೆ. 24 ಹೊಸ ಸಚಿವರು ಇವತ್ತು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದೆ. ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

madhu%20bangarappaನಿರೀಕ್ಷೆಯಂತೆ ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ದಕ್ಕಿದೆ. ಇವತ್ತು ಬೆಳಗ್ಗೆ 11.45ಕ್ಕೆ ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ ಚೆಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಸಿಎಂ, ಡಿಸಿಎಂಗೆ ಆಪ್ತರು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣ ಪ್ರತ್ಯೇಕವಾಗಿ ಪಟ್ಟಿ ನೀಡಿದ್ದು, ಅದರಂತೆ ಸಂಪುಟ ರಚನೆಯಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಸೊರಬ ಶಾಸಕ ಮಧು ಬಂಗಾರಪ್ಪ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಇಬ್ಬರಿಗೂ ಆಪ್ತರು. ಹಾಗಾಗಿ ಮಧು ಬಂಗಾರಪ್ಪ ಸಚಿವರಾಗುವುದು (Minister) ಬಹುತೇಕ ಖಚಿತವಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

ಸಚಿವ ಸ್ಥಾನ ಮೊದಲೇ ಸಿಗಬೇಕಿತ್ತು

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅದೆ ವೇದಿಕೆಯಲ್ಲಿ ಮಧು ಬಂಗಾರಪ್ಪ ಅವರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವರ ಹೆಸರು ಪಟ್ಟಿಯಿಂದ ಕೈ ಬಿಡಲಾಗಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದೆ ಕಾರಣಕ್ಕೆ ಮಧು ಬಂಗಾರಪ್ಪ ಅವರು ಮುನಿಸಿಕೊಂಡಿದ್ದರು ಎಂದು ಸುದ್ದಿಯಾಗಿತ್ತು. ಆ ದಿನ ಕಾರ್ಯಕ್ರಮಕ್ಕೆ ಮಧು ಬಂಗಾರಪ್ಪ ಗೈರಾಗಿದ್ದು ಇದಕ್ಕೆ ಪುಷ್ಠಿ ನೀಡಿತ್ತು.

ಉಸ್ತುವಾರಿ ಮಂತ್ರಿಯಾಗ್ತಾರಾ?

ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಮೂವರು ಶಾಸಕರಾಗಿದ್ದಾರೆ. ಈ ಪೈಕಿ ಮಧು ಬಂಗಾರಪ್ಪ ಅವರು ಮಾತ್ರ ಸಚಿವರಾಗಿದ್ದಾರೆ. ಹಾಗಾಗಿ ಅವರೆ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ ಎಂದು ಹೇಳಲಾಗುತ್ತಿದೆ. ಜಿಲ್ಲೆಯವರಿಗೆ ಉಸ್ತುವಾರಿಯ ಹೊಣೆಗಾರಿಕೆ ನೀಡಬೇಕು ಎಂಬ ಒತ್ತಡವಿದೆ. ಇನ್ನು, ಜಿಲ್ಲೆಯವರೆ ಉಸ್ತುವಾರಿ ಸಚಿವರಾದರೆ ಇಲ್ಲಿಯ ಸಮಸ್ಯೆಗಳು, ಜನರ ಬೇಡಿಕೆಗಳನ್ನು ಅರಿತು ಈಡೇರಿಸಲು ಸುಲಭವಾಗಲಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಮಾಜಿ ಸಿಎಂ ಮಗ ಮೊದಲ ಬಾರಿ ಮಿನಿಸ್ಟರ್‌

ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಗರಡಿಯಲ್ಲಿ ಮಧು ಬಂಗಾರಪ್ಪ ಅವರು ರಾಜಕಾರಣ ಕಲಿತರು. ಸೊರಬ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್‌ ಪಕ್ಷದಿಂದ ಶಾಸಕರಾಗಿದ್ದರು. ಶಿವಮೊಗ್ಗ ಲೋಕಸಭೆಯ ಉಪ ಚುನಾವಣೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದರು. ಪ್ರಣಾಳಿಕೆ ಸಮಿತಿಯಲ್ಲಿ ಮಧು ಬಂಗಾರಪ್ಪ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು. ಈಗ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದು, ಪ್ರಬಲ ಖಾತೆ ಸಿಗುವ ನಿರೀಕ್ಷೆ ಇದೆ.

SHIVAMOGGA-LIVE-NITIN-KAIDOTLU

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article DINA-BHAVISHYA ದಿನ ಭವಿಷ್ಯ – ಕೆಲಸ ಬದಲಾವಣೆಗೆ ಸೂಕ್ತ ಸಮಯ, ಯಾವ ರಾಶಿಗೆ? ಉಳಿದ ರಾಶಿಯವರಿಗೆ ಈ ದಿನ ಹೇಗಿರುತ್ತೆ?
Next Article Muppane-Launch-in-Sagara-Sharavathi-River. ಶರಾವತಿ ಹಿನ್ನೀರಿನ ಮುಪ್ಪಾನೆ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಕಾರಣವೇನು?

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
SORABA-NEWS-UPDATE
SORABA

ಸೊರಬದಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರಿಗೆ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Parked-Car-burt-at-soraba
SORABA

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ದಿಢೀರ್‌ ಬೆಂಕಿ, ಧಗಧಗ ಹೊತ್ತಿ ಉರಿದು ಸುಟ್ಟು ಕರಕಲು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
060525 Soraba alahallai shiruru villagers protest
SORABA

ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ವಿರೋಧ, ನಿರಂತರ ಹೋರಾಟದ ಎಚ್ಚರಿಕೆ ನೀಡಿದ ಜನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
bjp-candidate-prabhu-mestri-wins-purasabhe-election
SORABA

ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/04/2025
Madhu-Bangarappa-helps-the-injured.
SORABA

ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?